ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ನಮ್ಮ ಪೂರ್ವಜರ ಆಹಾರ ಕ್ರಮವಾಗಿದ್ದ ಸಿರಿಧಾನ್ಯಗಳು ಆಧುನಿಕ ಭರಾಟೆಯ ನಡುವೆ ಕಳೆದುಹೋಗಿದ್ದವು. ಇದೀಗ ಜಾಗೃತಗೊಂಡಿರುವ ಜನರು, ಸಿರಿಧಾನ್ಯ ಬಳಕೆ ಸೇರಿದಂತೆ ಸಾವಯವ ಆಹಾರದ ಕಡೆಗೆ ಒಲವು ತೋರುತ್ತಿದ್ದಾರೆ. ರೈತರು ಸಾವಯವ ಕೃಷಿಯತ್ತ ಹೆಚ್ಚಿನ ಒಲವು ತೋರಬೇಕು’ ಎಂದು ಮನವಿ ಮಾಡಿದರು.