<p><strong>ಬೆಂಗಳೂರು:</strong> ಜನವರಿ 2ರಿಂದ 12ರವರೆಗೆ ನಡೆದ ಬೂತ್ ವಿಜಯ ಅಭಿಯಾನದಲ್ಲಿ ರಾಜ್ಯದ 32 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸಲಾಗಿದೆ ಎಂದು ಅಭಿಯಾನದ ಸಂಚಾಲಕರೂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿಯಾನದ ಅವಧಿಯಲ್ಲಿ 51,872 ಮತಗಟ್ಟೆ ಹಂತದ ಸಮಿತಿ ರಚಿಸಿದ್ದು, 13.21 ಲಕ್ಷ ‘ಪೇಜ್ ಪ್ರಮುಖ’ರನ್ನು ನೇಮಕ ಮಾಡಲಾಗಿದೆ. ಕಾರ್ಯಕರ್ತರಿಗಾಗಿ 50,260 ವಾಟ್ಸ್ ಆ್ಯಪ್ ಗುಂಪುಗಳನ್ನು ರಚಿಸಲಾಗಿದೆ. 15.93 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ’ ಎಂದರು.</p>.<p>ಇನ್ನು ಕೆಲವು ದಿನಗಳಲ್ಲಿ ಒಟ್ಟು 50 ಲಕ್ಷ ಮನೆಗಳ ಮೇಲೆ ಪಕ್ಷದ ಬಾವುಟ ಹಾರಿಸುವ ಗುರಿ ಸಾಧಿಸಲಾಗುವುದು. ಬೂತ್ ವಿಜಯ ಅಭಿಯಾನವೇ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ ಎಂದು ಹೇಳಿದರು.</p>.<p>ಅಭಿಯಾನದ ಸಹ ಸಂಚಾಲಕರಾಗಿರುವ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ, ‘ಪ್ರತಿ ಮತಗಟ್ಟೆ ಹಂತದಲ್ಲೂ ಬಿಜೆಪಿ ಗೆಲುವು ಸಾಧಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರಿ ನೀಡಿದ್ದಾರೆ. ಈ ಅಭಿಯಾನದ ಮೂಲಕ ರಾಜ್ಯದ ಮನೆ, ಮನೆಯನ್ನೂ ತಲುಪುವ ಪ್ರಯತ್ನ ಆರಂಭವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಜನವರಿ 2ರಿಂದ 12ರವರೆಗೆ ನಡೆದ ಬೂತ್ ವಿಜಯ ಅಭಿಯಾನದಲ್ಲಿ ರಾಜ್ಯದ 32 ಲಕ್ಷ ಮನೆಗಳ ಮೇಲೆ ಬಿಜೆಪಿ ಬಾವುಟ ಹಾರಿಸಲಾಗಿದೆ ಎಂದು ಅಭಿಯಾನದ ಸಂಚಾಲಕರೂ ಆಗಿರುವ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.</p>.<p>ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಭಿಯಾನದ ಅವಧಿಯಲ್ಲಿ 51,872 ಮತಗಟ್ಟೆ ಹಂತದ ಸಮಿತಿ ರಚಿಸಿದ್ದು, 13.21 ಲಕ್ಷ ‘ಪೇಜ್ ಪ್ರಮುಖ’ರನ್ನು ನೇಮಕ ಮಾಡಲಾಗಿದೆ. ಕಾರ್ಯಕರ್ತರಿಗಾಗಿ 50,260 ವಾಟ್ಸ್ ಆ್ಯಪ್ ಗುಂಪುಗಳನ್ನು ರಚಿಸಲಾಗಿದೆ. 15.93 ಲಕ್ಷ ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ’ ಎಂದರು.</p>.<p>ಇನ್ನು ಕೆಲವು ದಿನಗಳಲ್ಲಿ ಒಟ್ಟು 50 ಲಕ್ಷ ಮನೆಗಳ ಮೇಲೆ ಪಕ್ಷದ ಬಾವುಟ ಹಾರಿಸುವ ಗುರಿ ಸಾಧಿಸಲಾಗುವುದು. ಬೂತ್ ವಿಜಯ ಅಭಿಯಾನವೇ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ ಎಂದು ಹೇಳಿದರು.</p>.<p>ಅಭಿಯಾನದ ಸಹ ಸಂಚಾಲಕರಾಗಿರುವ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಮಾತನಾಡಿ, ‘ಪ್ರತಿ ಮತಗಟ್ಟೆ ಹಂತದಲ್ಲೂ ಬಿಜೆಪಿ ಗೆಲುವು ಸಾಧಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರಿ ನೀಡಿದ್ದಾರೆ. ಈ ಅಭಿಯಾನದ ಮೂಲಕ ರಾಜ್ಯದ ಮನೆ, ಮನೆಯನ್ನೂ ತಲುಪುವ ಪ್ರಯತ್ನ ಆರಂಭವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>