ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ಸಿಂಗ್ ಅವರು ಗುರುವಾರದಿಂದ ಏ.8 ರವರೆಗೆ ರಾಜ್ಯ ಪ್ರವಾಸಕ್ಕೆ ಬರಲಿದ್ದು, ಮೂರು ಕ್ಷೇತ್ರಗಳ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ.
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕಾರಣ ಅವರನ್ನು ಕರೆಸಿ ತಿಳಿ ಹೇಳುವ ಸಾಧ್ಯತೆ ಇದೆ ಎಂದು ಮೂಲಗಳಿವೆ.
ಏ. 8 ರಂದು ಮಧ್ಯಾಹ್ನ 1.30 ಕ್ಕೆ ನಗರಕ್ಕೆ ಬಂದು ವಿಮಾನದ ಮೂಲಕ ಮಂಗಳೂರಿಗೆ ತೆರಳುವರು. ರಾತ್ರಿ ಪುತ್ತೂರಿನ ಕುಂಜಾಡಿಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ, ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಏ.9 ರಂದು ಬೆಳಗಾವಿಯಲ್ಲಿ, 10ರಂದು ಮಸ್ಕಿ, 11 ರಂದು ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸುವರು. ಏ.11ರ ಸಂಜೆ ಹೈದರಾಬಾದ್ ವಿಮಾನ ನಿಲ್ದಾಣದಿಂದ ದೆಹಲಿಗೆಹಿಂತಿರುಗಲಿದ್ದಾರೆ.