<p><strong>ಬೆಂಗಳೂರು</strong>: ‘ಹೆಚ್ಚು, ಕಡಿಮೆ ಎನ್ನುವ ಭಿನ್ನಾಭಿಪ್ರಾಯವಿಲ್ಲದೇ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿದರೆ ಭವಿಷ್ಯದ ದಿನಗಳಲ್ಲಿ 2006ರ ಮಾದರಿಯಲ್ಲೇ ಸರ್ಕಾರ ರಚಿಸುವ ಸಾಧ್ಯತೆ ನಮ್ಮೆದುರಿಗೆ ಇದೆ’ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರದ ನೂತನ ಸಚಿವರು ಮತ್ತು ಎನ್ಡಿಎ ಸಂಸದರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಆರಂಭವಾದ ಮೈತ್ರಿ ಮುಂದುವರಿಯಬೇಕು. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಸೇರಿ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮೈತ್ರಿ ಇರಬೇಕು. ಎರಡೂ ಪಕ್ಷಗಳೂ ಮುಕ್ತ ಮನಸ್ಸಿನಿಂದ ಸಾಗಬೇಕು. ಮೈತ್ರಿಕೂಟ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕು ಎಂದರು.</p>.<p>‘ನಮ್ಮಗಳ ಮಧ್ಯೆ ಯಾವುದೇ ಒಡಕು ಇರಬಾರದು. ಅಣ್ಣ, ತಮ್ಮಂದಿರ ರೀತಿಯಲ್ಲಿ ಇರಬೇಕು. ಒಗ್ಗಟ್ಟು ಮುರಿಯಲು ಯಾರೇ ಯತ್ನಿಸಿದರೂ ಕಿವಿ ಮೇಲೆ ಹಾಕಿಕೊಳ್ಳಬಾರದು’ ಎಂದು ಹೇಳಿದರು.</p>.<p><strong>ಪರಿಚಯಿಸಿದ್ದು ಬಿಎಸ್ವೈ:</strong> </p><p>‘2006ರಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರಿಂದ ಈ ನಾಡಿಗೆ ನನ್ನ ಪರಿಚಯ ಆಯಿತು. ಅದಕ್ಕೆ ಕಾರಣ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು. ನನಗಿಂತ ಹಿರಿಯರಾದರೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಮುಕ್ತ ಸಹಕಾರ ನೀಡಿದ್ದರು’ ಎಂದರು.</p>.<p>ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ: ‘ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳೇ ಕಾರಣ’ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p>.<p>‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಅದಕ್ಕಾಗಿ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ಜನರನ್ನು ದೋಚುತ್ತಿದೆ’ ಎಂದರು.</p>.<div><blockquote>ಹಿಂದೆ ಯಡಿಯೂರಪ್ಪ ಅವರಿಗೆ ನಾನು ಅಧಿಕಾರ ಹಸ್ತಾಂತರಿಸಬೇಕಿತ್ತು. ಕೆಲವರ ಕುತಂತ್ರದಿಂದ ಆಗಲಿಲ್ಲ. ಆಗ ನಮ್ಮ ಮೈತ್ರಿಕೂಟ ಅಧಿಕಾರದಲ್ಲಿ ಮುಂದುವರಿದಿದ್ದರೆ ಈಗ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಇರುತ್ತಿರಲಿಲ್ಲ.</blockquote><span class="attribution"> ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹೆಚ್ಚು, ಕಡಿಮೆ ಎನ್ನುವ ಭಿನ್ನಾಭಿಪ್ರಾಯವಿಲ್ಲದೇ ಬಿಜೆಪಿ–ಜೆಡಿಎಸ್ ಮೈತ್ರಿ ಮುಂದುವರಿದರೆ ಭವಿಷ್ಯದ ದಿನಗಳಲ್ಲಿ 2006ರ ಮಾದರಿಯಲ್ಲೇ ಸರ್ಕಾರ ರಚಿಸುವ ಸಾಧ್ಯತೆ ನಮ್ಮೆದುರಿಗೆ ಇದೆ’ ಎಂದು ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಘಟಕದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರದ ನೂತನ ಸಚಿವರು ಮತ್ತು ಎನ್ಡಿಎ ಸಂಸದರ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಲೋಕಸಭಾ ಚುನಾವಣೆಯಲ್ಲಿ ಆರಂಭವಾದ ಮೈತ್ರಿ ಮುಂದುವರಿಯಬೇಕು. ಮೈಸೂರು ಮಹಾನಗರ ಪಾಲಿಕೆ ಚುನಾವಣೆ ಸೇರಿ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಮೈತ್ರಿ ಇರಬೇಕು. ಎರಡೂ ಪಕ್ಷಗಳೂ ಮುಕ್ತ ಮನಸ್ಸಿನಿಂದ ಸಾಗಬೇಕು. ಮೈತ್ರಿಕೂಟ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಸಜ್ಜಾಗಬೇಕು ಎಂದರು.</p>.<p>‘ನಮ್ಮಗಳ ಮಧ್ಯೆ ಯಾವುದೇ ಒಡಕು ಇರಬಾರದು. ಅಣ್ಣ, ತಮ್ಮಂದಿರ ರೀತಿಯಲ್ಲಿ ಇರಬೇಕು. ಒಗ್ಗಟ್ಟು ಮುರಿಯಲು ಯಾರೇ ಯತ್ನಿಸಿದರೂ ಕಿವಿ ಮೇಲೆ ಹಾಕಿಕೊಳ್ಳಬಾರದು’ ಎಂದು ಹೇಳಿದರು.</p>.<p><strong>ಪರಿಚಯಿಸಿದ್ದು ಬಿಎಸ್ವೈ:</strong> </p><p>‘2006ರಲ್ಲಿ ಬಿಜೆಪಿ ಜತೆ ಸೇರಿ ಸರ್ಕಾರ ರಚಿಸಿದ್ದರಿಂದ ಈ ನಾಡಿಗೆ ನನ್ನ ಪರಿಚಯ ಆಯಿತು. ಅದಕ್ಕೆ ಕಾರಣ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ಅವರು. ನನಗಿಂತ ಹಿರಿಯರಾದರೂ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಮುಕ್ತ ಸಹಕಾರ ನೀಡಿದ್ದರು’ ಎಂದರು.</p>.<p>ಬೆಲೆ ಏರಿಕೆಗೆ ಗ್ಯಾರಂಟಿ ಕಾರಣ: ‘ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಸೇರಿದಂತೆ ಎಲ್ಲ ಉತ್ಪನ್ನಗಳ ಬೆಲೆ ಏರಿಕೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳೇ ಕಾರಣ’ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.</p>.<p>‘ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಹೆಣಗಾಡುತ್ತಿದೆ. ಅದಕ್ಕಾಗಿ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಾ ಜನರನ್ನು ದೋಚುತ್ತಿದೆ’ ಎಂದರು.</p>.<div><blockquote>ಹಿಂದೆ ಯಡಿಯೂರಪ್ಪ ಅವರಿಗೆ ನಾನು ಅಧಿಕಾರ ಹಸ್ತಾಂತರಿಸಬೇಕಿತ್ತು. ಕೆಲವರ ಕುತಂತ್ರದಿಂದ ಆಗಲಿಲ್ಲ. ಆಗ ನಮ್ಮ ಮೈತ್ರಿಕೂಟ ಅಧಿಕಾರದಲ್ಲಿ ಮುಂದುವರಿದಿದ್ದರೆ ಈಗ ಕಾಂಗ್ರೆಸ್ ಪಕ್ಷವೇ ರಾಜ್ಯದಲ್ಲಿ ಇರುತ್ತಿರಲಿಲ್ಲ.</blockquote><span class="attribution"> ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>