ಪುಟ್ಟಣ್ಣ ಮಾತನಾಡಿ, ‘ಆರೋಗ್ಯ ವಿಮೆ, ಪಿಂಚಣಿ, ಶಿಕ್ಷಕರ ರಕ್ಷಣಾ ಕಾಯ್ದೆ, ಎಲ್.ಆರ್. ವೈದ್ಯನಾಥನ್ ವರದಿ ಜಾರಿ ಸೇರಿದಂತೆ ಶಿಕ್ಷಕರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಕೆಲ ದಿನಗಳಲ್ಲೇ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಿ, ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಹೇಳಿದರು.