<p><strong>ಬೆಂಗಳೂರು:</strong> ‘ರಾಜ್ಯದಲ್ಲೇ ನಿವೃತ್ತ ಐಎಎಸ್ ಅಧಿಕಾರಿಗಳೂ ಸೇರಿದಂತೆ ಅನುಭವಿ ತಜ್ಞರು ಇರುವಾಗ ರಾಜ್ಯ ಸರ್ಕಾರವು ಸಂಪನ್ಮೂಲ ಸಂಗ್ರಹಕ್ಕೆ ಸಲಹೆ ಪಡೆಯಲು ವಿದೇಶಿ ಕಂಪನಿಯನ್ನು ನೇಮಿಸಿಕೊಳ್ಳುವ ಅಗತ್ಯವಿದೆಯೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ ಪ್ರಶ್ನಿಸಿದ್ದಾರೆ.</p>.<p>ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ವರಮಾನ ಸಂಗ್ರಹದ ಕುರಿತು ಸಲಹೆ ಪಡೆಯಲು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ಕಂಪನಿಗೆ ₹ 10 ಕೋಟಿ ಪಾವತಿಸುತ್ತಿದೆ ಎಂಬ ಮಾಹಿತಿ ನೋಡಿ ಆಶ್ಚರ್ಯವಾಯಿತು. ಸರ್ಕಾರ ಇಂತಹ ದುಬಾರಿ ವೆಚ್ಚದ ನಿರ್ಧಾರಗಳನ್ನು ಕೈಗೊಳ್ಳುವ ಅಗತ್ಯವಿದೆಯೆ’ ಎಂದು ಕೇಳಿದ್ದಾರೆ.</p>.<p>ನಿವೃತ್ತ ಐಎಎಸ್ ಅಧಿಕಾರಿಗಳಾದ ಐ.ಎಸ್.ಎನ್. ಪ್ರಸಾದ್, ಚಿರಂಜೀವಿ ಸಿಂಗ್, ವಿ. ಬಾಲಸುಬ್ರಮಣಿಯನ್, ಎಂ.ಆರ್. ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಅನುಭವಿಗಳು ವರಮಾನ ಸಂಗ್ರಹ ಹೆಚ್ಚಳಕ್ಕೆ ಸಲಹೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ರಾಜ್ಯದಲ್ಲೇ ಇಂತಹ ಪ್ರತಿಭಾವಂತರು ಇರುವಾಗ ವಿದೇಶಿ ಕಂಪನಿಯ ಸಲಹೆ ಅನಿವಾರ್ಯವಾಗದು ಎಂದಿದ್ದಾರೆ.</p>.<p>‘ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಆರ್ಥಿಕತೆ ಸಂಕಷ್ಟದಲ್ಲಿದೆ ಎಂಬುದು ಈ ತೀರ್ಮಾನದಿಂದ ಬಹಿರಂಗವಾಗಿದೆ. ರಾಜ್ಯದ ದೀರ್ಘಾವಧಿಯ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಗ್ಯಾರಂಟಿಗಳನ್ನು ಹಿಂಪಡೆಯುವುದಕ್ಕೂ ಸರ್ಕಾರ ಹಿಂದೇಟು ಹಾಕಬಾರದು. ಸರ್ಕಾರ ಈ ವಿಚಾರದಲ್ಲಿ ಪ್ರತಿಷ್ಠೆಗೆ ಬೀಳಬಾರದು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಾಜ್ಯದಲ್ಲೇ ನಿವೃತ್ತ ಐಎಎಸ್ ಅಧಿಕಾರಿಗಳೂ ಸೇರಿದಂತೆ ಅನುಭವಿ ತಜ್ಞರು ಇರುವಾಗ ರಾಜ್ಯ ಸರ್ಕಾರವು ಸಂಪನ್ಮೂಲ ಸಂಗ್ರಹಕ್ಕೆ ಸಲಹೆ ಪಡೆಯಲು ವಿದೇಶಿ ಕಂಪನಿಯನ್ನು ನೇಮಿಸಿಕೊಳ್ಳುವ ಅಗತ್ಯವಿದೆಯೆ’ ಎಂದು ರಾಜ್ಯಸಭೆಯ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯ ಪ್ರಶ್ನಿಸಿದ್ದಾರೆ.</p>.<p>ಈ ಕುರಿತು ಶನಿವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ರಾಜ್ಯ ಸರ್ಕಾರವು ವರಮಾನ ಸಂಗ್ರಹದ ಕುರಿತು ಸಲಹೆ ಪಡೆಯಲು ಬಾಸ್ಟನ್ ಕನ್ಸಲ್ಟಿಂಗ್ ಗ್ರೂಪ್ ಎಂಬ ಕಂಪನಿಗೆ ₹ 10 ಕೋಟಿ ಪಾವತಿಸುತ್ತಿದೆ ಎಂಬ ಮಾಹಿತಿ ನೋಡಿ ಆಶ್ಚರ್ಯವಾಯಿತು. ಸರ್ಕಾರ ಇಂತಹ ದುಬಾರಿ ವೆಚ್ಚದ ನಿರ್ಧಾರಗಳನ್ನು ಕೈಗೊಳ್ಳುವ ಅಗತ್ಯವಿದೆಯೆ’ ಎಂದು ಕೇಳಿದ್ದಾರೆ.</p>.<p>ನಿವೃತ್ತ ಐಎಎಸ್ ಅಧಿಕಾರಿಗಳಾದ ಐ.ಎಸ್.ಎನ್. ಪ್ರಸಾದ್, ಚಿರಂಜೀವಿ ಸಿಂಗ್, ವಿ. ಬಾಲಸುಬ್ರಮಣಿಯನ್, ಎಂ.ಆರ್. ಶ್ರೀನಿವಾಸಮೂರ್ತಿ ಸೇರಿದಂತೆ ಹಲವು ಅನುಭವಿಗಳು ವರಮಾನ ಸಂಗ್ರಹ ಹೆಚ್ಚಳಕ್ಕೆ ಸಲಹೆ ನೀಡುವ ಸಾಮರ್ಥ್ಯ ಹೊಂದಿದ್ದಾರೆ. ರಾಜ್ಯದಲ್ಲೇ ಇಂತಹ ಪ್ರತಿಭಾವಂತರು ಇರುವಾಗ ವಿದೇಶಿ ಕಂಪನಿಯ ಸಲಹೆ ಅನಿವಾರ್ಯವಾಗದು ಎಂದಿದ್ದಾರೆ.</p>.<p>‘ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯ ಸರ್ಕಾರದ ಆರ್ಥಿಕತೆ ಸಂಕಷ್ಟದಲ್ಲಿದೆ ಎಂಬುದು ಈ ತೀರ್ಮಾನದಿಂದ ಬಹಿರಂಗವಾಗಿದೆ. ರಾಜ್ಯದ ದೀರ್ಘಾವಧಿಯ ಹಿತಾಸಕ್ತಿಯನ್ನು ಗಮನದಲ್ಲಿ ಇರಿಸಿಕೊಂಡು ಗ್ಯಾರಂಟಿಗಳನ್ನು ಹಿಂಪಡೆಯುವುದಕ್ಕೂ ಸರ್ಕಾರ ಹಿಂದೇಟು ಹಾಕಬಾರದು. ಸರ್ಕಾರ ಈ ವಿಚಾರದಲ್ಲಿ ಪ್ರತಿಷ್ಠೆಗೆ ಬೀಳಬಾರದು’ ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>