<p><strong>ಬೆಂಗಳೂರು:</strong> ಪಾಲಿಕೆಯ ಮಾಜಿ ಸದಸ್ಯರೂ ಆಗಿದ್ದ ಬಿಜೆಪಿ ಮುಖಂಡ ಎಂ.ಬಿ. ಶಿವಪ್ಪ (58) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ, ಅವರ ಪತ್ನಿಯು ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದಾರೆ.</p>.<p>'ಅತ್ತಿಗುಪ್ಪೆಯ ಬಿಸಿಸಿ ಲೇಔಟ್ನಲ್ಲಿರುವ ಮನೆಯಲ್ಲಿ ಶಿವಪ್ಪ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪತಿ ಆತ್ಮಹತ್ಯೆಗೆ ಎಂಟು ಮಂದಿ ಪ್ರಚೋದನೆ ನೀಡಿದ್ದಾರೆ’ ಎಂದು ಆರೋಪಿಸಿ ಪತ್ನಿ ದೂರು ನೀಡಿದ್ದು, ಅದರನ್ವಯ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳಾದ ವಿ. ಧನಂಜಯಗೌಡ, ಬಿ. ಅರುಣ್ಕುಮಾರ್, ಅಶೋಕ ಕುಮಾರ್, ಸುಮನ್ ಸೇನಾ ಕೋಟ್ಯಾನ್, ವೆಂಕಟ ರಮಣ ರೆಡ್ಡಿ, ಕಾಶಿನಾಥ್, ಮನೀಸ್ ಚಂದಕ್, ಗೋವಿಂದರಾಜು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಅವರೆಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದೂ ತಿಳಿಸಿವೆ.</p>.<p class="Subhead">ವ್ಯವಹಾರದಲ್ಲಿ ಮೋಸ, ಬೆದರಿಕೆ: ‘ಶಿವಪ್ಪ ಅವರು 2005ರಲ್ಲಿ ಅತ್ತಿಗುಪ್ಪೆ ವಾರ್ಡ್ನಿಂದ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಅವರ ಆತ್ಮಹತ್ಯೆ ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಯಲ್ ಎಸ್ಟೇಟ್ನಲ್ಲಿ ಹಣ ಹೂಡಿಕೆ ಮಾಡುವಂತೆ ಆರೋಪಿಗಳು ಹೇಳಿದ್ದರು. ಅದನ್ನು ಶಿವಪ್ಪ ನಂಬಿದ್ದರು. ಅದನ್ನು ಬಂಡವಾಳ ಮಾಡಿಕೊಂಡ ಆರೋಪಿಗಳು, ಶಿವಪ್ಪ ಅವರ ಆಸ್ತಿಯನ್ನು ಮೋಸದಿಂದ ತಮ್ಮದಾಗಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಶಿವಪ್ಪ ಹಾಗೂ ಅವರ ಮಗನ ವಿರುದ್ಧವೇ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ವಿವರಿಸಿವೆ.</p>.<p>‘₹ 4 ಕೋಟಿ ನೀಡುವಂತೆ ಬೇಡಿಕೆ ಇರಿಸಿದ್ದ ಆರೋಪಿಗಳು, ಹಣ ಕೊಡದಿದ್ದರೆ ಕುಟುಂಬದ ಮರ್ಯಾದೆ ತೆಗೆಯುವುದಾಗಿ ಹಾಗೂ ಮಗನನ್ನು ಜೀವಂತ ಬಿಡುವುದಿಲ್ಲವೆಂದು ಬೆದರಿಸಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಂತೆ ಶಿವಪ್ಪ ಅವರಿಗೆ ಪ್ರಚೋದನೆ ನೀಡಿದ್ದರೆಂಬ ವಿಷಯವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪಾಲಿಕೆಯ ಮಾಜಿ ಸದಸ್ಯರೂ ಆಗಿದ್ದ ಬಿಜೆಪಿ ಮುಖಂಡ ಎಂ.ಬಿ. ಶಿವಪ್ಪ (58) ಅವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ, ಅವರ ಪತ್ನಿಯು ಚಂದ್ರಾಲೇಔಟ್ ಠಾಣೆಗೆ ದೂರು ನೀಡಿದ್ದಾರೆ.</p>.<p>'ಅತ್ತಿಗುಪ್ಪೆಯ ಬಿಸಿಸಿ ಲೇಔಟ್ನಲ್ಲಿರುವ ಮನೆಯಲ್ಲಿ ಶಿವಪ್ಪ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ‘ಪತಿ ಆತ್ಮಹತ್ಯೆಗೆ ಎಂಟು ಮಂದಿ ಪ್ರಚೋದನೆ ನೀಡಿದ್ದಾರೆ’ ಎಂದು ಆರೋಪಿಸಿ ಪತ್ನಿ ದೂರು ನೀಡಿದ್ದು, ಅದರನ್ವಯ ಕಾನೂನು ಕ್ರಮ ಕೈಗೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ಆರೋಪಿಗಳಾದ ವಿ. ಧನಂಜಯಗೌಡ, ಬಿ. ಅರುಣ್ಕುಮಾರ್, ಅಶೋಕ ಕುಮಾರ್, ಸುಮನ್ ಸೇನಾ ಕೋಟ್ಯಾನ್, ವೆಂಕಟ ರಮಣ ರೆಡ್ಡಿ, ಕಾಶಿನಾಥ್, ಮನೀಸ್ ಚಂದಕ್, ಗೋವಿಂದರಾಜು ಹಾಗೂ ಇತರರ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಅವರೆಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಬೇಕಿದೆ’ ಎಂದೂ ತಿಳಿಸಿವೆ.</p>.<p class="Subhead">ವ್ಯವಹಾರದಲ್ಲಿ ಮೋಸ, ಬೆದರಿಕೆ: ‘ಶಿವಪ್ಪ ಅವರು 2005ರಲ್ಲಿ ಅತ್ತಿಗುಪ್ಪೆ ವಾರ್ಡ್ನಿಂದ ಪಾಲಿಕೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಇತ್ತೀಚೆಗೆ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಅವರ ಆತ್ಮಹತ್ಯೆ ಹಲವು ಅನುಮಾನಗಳಿಗೆ ಕಾರಣವಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.</p>.<p>‘ರಿಯಲ್ ಎಸ್ಟೇಟ್ನಲ್ಲಿ ಹಣ ಹೂಡಿಕೆ ಮಾಡುವಂತೆ ಆರೋಪಿಗಳು ಹೇಳಿದ್ದರು. ಅದನ್ನು ಶಿವಪ್ಪ ನಂಬಿದ್ದರು. ಅದನ್ನು ಬಂಡವಾಳ ಮಾಡಿಕೊಂಡ ಆರೋಪಿಗಳು, ಶಿವಪ್ಪ ಅವರ ಆಸ್ತಿಯನ್ನು ಮೋಸದಿಂದ ತಮ್ಮದಾಗಿಸಿಕೊಂಡಿದ್ದರು. ಇದನ್ನು ಪ್ರಶ್ನಿಸಿದ್ದಕ್ಕೆ ಶಿವಪ್ಪ ಹಾಗೂ ಅವರ ಮಗನ ವಿರುದ್ಧವೇ ಪ್ರಕರಣ ದಾಖಲಿಸಿದ್ದರು ಎನ್ನಲಾಗಿದ್ದು, ಈ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ವಿವರಿಸಿವೆ.</p>.<p>‘₹ 4 ಕೋಟಿ ನೀಡುವಂತೆ ಬೇಡಿಕೆ ಇರಿಸಿದ್ದ ಆರೋಪಿಗಳು, ಹಣ ಕೊಡದಿದ್ದರೆ ಕುಟುಂಬದ ಮರ್ಯಾದೆ ತೆಗೆಯುವುದಾಗಿ ಹಾಗೂ ಮಗನನ್ನು ಜೀವಂತ ಬಿಡುವುದಿಲ್ಲವೆಂದು ಬೆದರಿಸಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವಂತೆ ಶಿವಪ್ಪ ಅವರಿಗೆ ಪ್ರಚೋದನೆ ನೀಡಿದ್ದರೆಂಬ ವಿಷಯವನ್ನೂ ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದೂ ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>