‘ಅನಂತರಾಜು ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ಶುರುವಾಗಿದೆ. ಎಲ್ಲ ಆಯಾಮದಲ್ಲಿ ತನಿಖೆ ನಡೆಸ ಲಾಗುತ್ತಿದ್ದು, ಸದ್ಯಕ್ಕೆ ಸಾವಿಗೆ ನಿಖರ ಕಾರಣ ಗೊತ್ತಾಗಿಲ್ಲ. ಅನಂತರಾಜು ಬರೆದಿದ್ದಾರೆ ಎನ್ನಲಾದ ಮರಣ ಪತ್ರವನ್ನು ಪತ್ನಿ ನೀಡಿದ್ದರು. ಅದನ್ನು ಈಗಾಗಲೇ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಸಾವಿನ ಬಗ್ಗೆ ಕೆಲ ಮಾಹಿತಿ ಬೇಕಾಗಿತ್ತು. ಹೀಗಾಗಿ, ಪತ್ನಿ ಸುಮಾ ವಿಚಾರಣೆ ಮಾಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.