‘ಮರ್ಯಾದೆಗೆ ಅಂಜಿದ್ದ ಪತಿ, ಯುವತಿ ಹಾಗೂ ಇತರೆ ಆರೋಪಿಗಳಿಗೆ ಹಣ ನೀಡಿದ್ದರು. ಅಷ್ಟಾದರೂ ಆರೋಪಿಗಳು, ಪದೇ ಪದೇ ಹಣಕ್ಕೆ ಪೀಡಿಸುತ್ತಿದ್ದರು. ಇದರಿಂದ ಬೇಸತ್ತ ಪತಿ, ಮರಣ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕೆ.ಆರ್.ಪುರ ಯುವತಿ ಮೋಸದ ಜಾಲಕ್ಕೆ ಸಿಲುಕಿ ಹಣ ಕಳೆದುಕೊಂಡೆ. ಮಾನಸಿಕ ಹಿಂಸೆ ಅನುಭವಿಸಿದೆ’ ಎಂದೂ ಮರಣಪತ್ರದಲ್ಲಿ ಬರೆದಿದ್ದಾರೆ’ ಎಂದೂ ಪತ್ನಿ ತಿಳಿಸಿದ್ದಾರೆ.