‘ಚುನಾವಣಾ ನೀತಿ ಸಂಹಿತೆ ಜಾರಿ ಆಗಲಿದ್ದು, ಇದೇ ಕೊನೆಯ ಸಂಪುಟ ಸಭೆಯಾಗಲಿದೆ. ಆದರೂ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸದೆ ಆಡಳಿತ ಸರ್ಕಾರ ಸುಳ್ಳು ಹೇಳಿ ಜಾರಿಕೊಂಡಿದೆ. ಬಿಜೆಪಿಯವರು ಜನರನ್ನು ದಿಕ್ಕು ತಪ್ಪಿಸುವ ತಂತ್ರಗಾರಿಕೆಯನ್ನು ಮಾಡಿದ್ದಾರೆ. ಈ ಸಹಕಾರಿ ಬ್ಯಾಂಕ್ ಹಗರಣದಲ್ಲಿ ತಪ್ಪಿತಸ್ಥರನ್ನು ಕಾಪಾಡುವ ಕೆಲಸ ಮಾಡಿದ್ದಾರೆ’ ಎಂದು ಡಾ.ಶಂಕರ್ ಆರೋಪಿಸಿದರು.