ನಗರದ ರೆಸಾರ್ಟ್ ಒಂದರಲ್ಲಿ ತಂಗಿರುವ ಅವರು, ಬಂಡಾಯ ಶಾಸಕರ ಇಚ್ಛೆಗೆ ವಿರುದ್ಧವಾಗಿ ಬೆಂಗಳೂರಿನಲ್ಲಿ ಅವರನ್ನು ಕೂಡಿ ಹಾಕಲಾಗಿದೆ ಎಂಬ ಸಿ.ಎಂ ಕಮಲನಾಥ್ ಹೇಳಿಕೆಯನ್ನು ಅಲ್ಲಗಳೆಯಲು ಹಾಗೂ ಅವರ ಕಾರ್ಯವೈಖರಿಯಿಂದಾಗಿಯೇ ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನ ಇದೆ ಎಂಬುದನ್ನು ತಿಳಿಸಲು ಈ ಪತ್ರಿಕಾಗೋಷ್ಠಿ ನಡೆಸಲಾಗಿದೆ ಎಂದರು. ‘ನಮಗೆ ಕಮಲನಾಥ್ ಅವರಿಂದ ಬೆದರಿಕೆ ಇದೆ, ಹೀಗಾಗಿ ಕೇಂದ್ರೀಯ ಪಡೆಗಳಿಂದ ರಕ್ಷಣೆ ನೀಡಬೇಕು’ ಎಂದು ಶಾಸಕ ಗೋವಿಂದ್ ಸಿಂಗ್ ರಜಪೂತ್ ಹೇಳಿದರು.