‘ಪೊಲೀಸರು ತಮ್ಮ ಕರ್ತವ್ಯವನ್ನು ನಿರ್ವಹಿಸಲು ಬಿಡದೇ ಸೌಮ್ಯಾ ರೆಡ್ಡಿ ಉದ್ಧಟತನದಿಂದ ವರ್ತಿಸಿದ್ದಾರೆ. ರಾಜಕೀಯ ನಾಯಕರಿಗೆ ಸಲ್ಲದ ದುರ್ವರ್ತನೆ ಇದಾಗಿದೆ. ಮಾಜಿ ಗೃಹ ಸಚಿವರ ಮಗಳು ಇತರರಿಗೆ ಮಾದರಿ ಆಗುವಂತೆ ನಡೆದುಕೊಳ್ಳಬೇಕಿತ್ತು. ಇವರ ವರ್ತನೆ ಕಾರ್ಯಕರ್ತರಿಗೆ ಹಿಂಸೆಯಲ್ಲಿ ತೊಡಗಲು ಪ್ರಚೋದನೆ ನೀಡುವಂತಿದೆ. ಇದರಿಂದ ಕಾನೂನು ಸುವ್ಯವಸ್ಥೆಗೂ ಧಕ್ಕೆ ಆಗುವ ಸಾಧ್ಯತೆ ಇದೆ’ ಎಂದು ಗೀತಾ ಅವರು ಮನವಿಯಲ್ಲಿ ವಿವರಿಸಿದ್ದಾರೆ.