<p><strong>ಬೆಂಗಳೂರು</strong>: ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧದ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪವನ್ನು ದೀರ್ಘಕಾಲ ಜೀವಂತವಾಗಿಡುವಂತೆ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿಯೇ ಸೋಮವಾರದಿಂದ ಸರಣಿ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.</p>.<p>ಭ್ರಷ್ಟಾಚಾರದ ಆರೋಪದ ಕಾರಣದಿಂದಾಗಿಯೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿತ್ತು. ಈಗ ಅದೇ ಆರೋಪವನ್ನು ಕಾಂಗ್ರೆಸ್ ವಿರುದ್ಧದ ಪ್ರಬಲ ಅಸ್ತ್ರವನ್ನಾಗಿ ಬಳಸಿ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.</p>.<p>ಈ ಕಾರ್ಯತಂತ್ರದ ಭಾಗವಾಗಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಸೋಮವಾರ ಭೇಟಿ ಮಾಡುವ ಸಾಧ್ಯತೆ ಇದೆ. ಈ ನಿಯೋಗವು, ಬಿಬಿಎಂಪಿ ಪ್ರಯೋಗಾಲಯದಲ್ಲಿ ನಡೆದಿರುವ ಅಗ್ನಿ ಅವಘಡದ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಲಿದೆ ಎಂದು ಗೊತ್ತಾಗಿದೆ.</p>.<p>ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ರೂಪುರೇಷೆ ನಿರ್ಧರಿಸುವುದಕ್ಕಾಗಿ ಬಿಜೆಪಿ ನಾಯಕರು ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸುವ ಕಾಂಗ್ರೆಸ್ನ ಪ್ರಯತ್ನಕ್ಕೆ ತಡೆಯೊಡ್ಡುವುದು ಈ ಕಾರ್ಯತಂತ್ರದ ಹಿಂದಿರುವ ಪ್ರಮುಖ ಉದ್ದೇಶ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕಾಂಗ್ರೆಸ್ ನೇತೃತ್ವದ ಸರ್ಕಾರದ ವಿರುದ್ಧದ ಕೇಳಿ ಬಂದಿರುವ ಭ್ರಷ್ಟಾಚಾರದ ಆರೋಪವನ್ನು ದೀರ್ಘಕಾಲ ಜೀವಂತವಾಗಿಡುವಂತೆ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿಯೇ ಸೋಮವಾರದಿಂದ ಸರಣಿ ಸಭೆಗಳನ್ನು ನಡೆಸುವ ಸಾಧ್ಯತೆ ಇದೆ.</p>.<p>ಭ್ರಷ್ಟಾಚಾರದ ಆರೋಪದ ಕಾರಣದಿಂದಾಗಿಯೇ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿತ್ತು. ಈಗ ಅದೇ ಆರೋಪವನ್ನು ಕಾಂಗ್ರೆಸ್ ವಿರುದ್ಧದ ಪ್ರಬಲ ಅಸ್ತ್ರವನ್ನಾಗಿ ಬಳಸಿ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯಲು ಬಿಜೆಪಿ ಮುಂದಾಗಿದೆ.</p>.<p>ಈ ಕಾರ್ಯತಂತ್ರದ ಭಾಗವಾಗಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ನೇತೃತ್ವದ ಬಿಜೆಪಿ ಮುಖಂಡರ ನಿಯೋಗ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಸೋಮವಾರ ಭೇಟಿ ಮಾಡುವ ಸಾಧ್ಯತೆ ಇದೆ. ಈ ನಿಯೋಗವು, ಬಿಬಿಎಂಪಿ ಪ್ರಯೋಗಾಲಯದಲ್ಲಿ ನಡೆದಿರುವ ಅಗ್ನಿ ಅವಘಡದ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಲಿದೆ ಎಂದು ಗೊತ್ತಾಗಿದೆ.</p>.<p>ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟದ ರೂಪುರೇಷೆ ನಿರ್ಧರಿಸುವುದಕ್ಕಾಗಿ ಬಿಜೆಪಿ ನಾಯಕರು ಸೋಮವಾರ ಅಥವಾ ಮಂಗಳವಾರ ಸಭೆ ನಡೆಸಲಿದ್ದಾರೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಮುನ್ನಡೆ ಸಾಧಿಸುವ ಕಾಂಗ್ರೆಸ್ನ ಪ್ರಯತ್ನಕ್ಕೆ ತಡೆಯೊಡ್ಡುವುದು ಈ ಕಾರ್ಯತಂತ್ರದ ಹಿಂದಿರುವ ಪ್ರಮುಖ ಉದ್ದೇಶ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>