‘ಶಾಸಕರು ಮನೆಯಲ್ಲಿರದ ವೇಳೆಯಲ್ಲೇ ಜೆಡಿಎಸ್ ಕಾರ್ಯಕರ್ತರು, ಮನೆಗೆ ನುಗ್ಗಿ ಕುಟುಂಬಸ್ಥರ ಮೇಲೆ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ್ದಾರೆ. ಶಾಸಕರ ತಂದೆ–ತಾಯಿಯನ್ನು ರಕ್ಷಿಸಲು ಬಂದ ಬಿಜೆಪಿ ಕಾರ್ಯಕರ್ತನ ಮೇಲೂ ಹಲ್ಲೆ ಮಾಡಿ ಗೂಂಡಾಗಳ ರೀತಿಯಲ್ಲಿ ವರ್ತಿಸಿದ್ದಾರೆ. ಇಂಥ ಗೂಂಡಾ ಪ್ರವೃತ್ತಿಗೆ ನಾವು ಹೆದರುವುದಿಲ್ಲ’ ಎಂದು ಗುಡುಗಿದರು.