<p><strong>ಬೆಂಗಳೂರು:</strong> ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ, ಬಿಜೆಪಿ ಮುಖಂಡರು ನಡೆಸಿದ್ದ ಪ್ರತಿಭಟನೆ ವೇಳೆ ಹೈಕೋರ್ಟ್ ಆದೇಶ ಉಲ್ಲಂಘಿಸಿದ ಆರೋಪದ ಅಡಿ 11 ಮಂದಿಗೆ ಗೋವಿಂದರಾಜನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. </p>.<p>ವಿಜಯನಗರದ ಉಮೇಶ್ ಶೆಟ್ಟಿ, ರಂಗನಾಥಪುರದ ಮಂಜುನಾಥ್, ಬಿಡಿಎ ಲೇಔಟ್ ನಿವಾಸಿ ಗಂಗಮ್ಮ, ದಾಸರಹಳ್ಳಿಯ ಹೇಮಲತಾ, ನಾಯಂಡಹಳ್ಳಿಯ ಪಲ್ಲವಿ, ಅಗ್ರಹಾರ ದಾಸರಹಳ್ಳಿಯ ಲಕ್ಷ್ಮಿ, ಮಂಗಳಾ, ಶಾರದಾ, ಸುರೇಶ್, ಶಕ್ತಿವೀರ್ ಸೇರಿ 11 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.</p>.<p>‘ಈ ಪ್ರಕರಣದಲ್ಲಿ ನೀವುಗಳು ಆರೋಪಿಗಳಾಗಿದ್ದು, ವಿಚಾರಣೆಗೆ ಒಳಪಡಿಸಲು ಪೂರಕ ಕಾರಣಗಳಿವೆ. ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಯ ಎದುರು ವಿಚಾರಣೆಗೆ ಹಾಜರಾಗಬೇಕು’ ಎಂದು ಗೋವಿಂದರಾಜನಗರ ಠಾಣೆಯ ಪೊಲೀಸರು ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p><strong>ನೋಟಿಸ್ನಲ್ಲಿ ಏನಿದೆ?:</strong> </p><p>‘ವಿಜಯನಗರದ ಎಂಸಿ ಲೇಔಟ್ನ ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಬಿಜೆಪಿ ಕಚೇರಿ ಎದುರು ಬಿಜೆಪಿ ಪಕ್ಷದ ಉಮೇಶ್ ಶೆಟ್ಟಿ ನೇತೃತ್ವದಲ್ಲಿ 20ರಿಂದ 25 ಮಂದಿ ಗುಂಪು ಸೇರಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಸ್ಥಳದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ಯಾವುದೇ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸಬೇಕು ಎಂದು ಹೈಕೋರ್ಟ್ ಆದೇಶವಿದೆ. ಆದೇಶದ ಪ್ರತಿಯನ್ನೂ ಪ್ರತಿಭಟನಕಾರರಿಗೆ ತೋರಿಸಲಾಗಿತ್ತು. ಆದರೂ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ, ಬಿಜೆಪಿ ಮುಖಂಡರು ನಡೆಸಿದ್ದ ಪ್ರತಿಭಟನೆ ವೇಳೆ ಹೈಕೋರ್ಟ್ ಆದೇಶ ಉಲ್ಲಂಘಿಸಿದ ಆರೋಪದ ಅಡಿ 11 ಮಂದಿಗೆ ಗೋವಿಂದರಾಜನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಬರುವಂತೆ ಸೂಚಿಸಿದ್ದಾರೆ. </p>.<p>ವಿಜಯನಗರದ ಉಮೇಶ್ ಶೆಟ್ಟಿ, ರಂಗನಾಥಪುರದ ಮಂಜುನಾಥ್, ಬಿಡಿಎ ಲೇಔಟ್ ನಿವಾಸಿ ಗಂಗಮ್ಮ, ದಾಸರಹಳ್ಳಿಯ ಹೇಮಲತಾ, ನಾಯಂಡಹಳ್ಳಿಯ ಪಲ್ಲವಿ, ಅಗ್ರಹಾರ ದಾಸರಹಳ್ಳಿಯ ಲಕ್ಷ್ಮಿ, ಮಂಗಳಾ, ಶಾರದಾ, ಸುರೇಶ್, ಶಕ್ತಿವೀರ್ ಸೇರಿ 11 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದೆ.</p>.<p>‘ಈ ಪ್ರಕರಣದಲ್ಲಿ ನೀವುಗಳು ಆರೋಪಿಗಳಾಗಿದ್ದು, ವಿಚಾರಣೆಗೆ ಒಳಪಡಿಸಲು ಪೂರಕ ಕಾರಣಗಳಿವೆ. ನೋಟಿಸ್ ತಲುಪಿದ ಮೂರು ದಿನಗಳ ಒಳಗಾಗಿ ತನಿಖಾಧಿಕಾರಿಯ ಎದುರು ವಿಚಾರಣೆಗೆ ಹಾಜರಾಗಬೇಕು’ ಎಂದು ಗೋವಿಂದರಾಜನಗರ ಠಾಣೆಯ ಪೊಲೀಸರು ನೋಟಿಸ್ನಲ್ಲಿ ಸೂಚಿಸಿದ್ದಾರೆ.</p>.<p><strong>ನೋಟಿಸ್ನಲ್ಲಿ ಏನಿದೆ?:</strong> </p><p>‘ವಿಜಯನಗರದ ಎಂಸಿ ಲೇಔಟ್ನ ನಾಗರಬಾವಿ ಮುಖ್ಯರಸ್ತೆಯಲ್ಲಿರುವ ಬಿಜೆಪಿ ಕಚೇರಿ ಎದುರು ಬಿಜೆಪಿ ಪಕ್ಷದ ಉಮೇಶ್ ಶೆಟ್ಟಿ ನೇತೃತ್ವದಲ್ಲಿ 20ರಿಂದ 25 ಮಂದಿ ಗುಂಪು ಸೇರಿಕೊಂಡು ಪ್ರತಿಭಟನೆ ನಡೆಸಿದ್ದರು. ಆ ಸ್ಥಳದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇಲ್ಲ. ಯಾವುದೇ ಪ್ರತಿಭಟನೆಯನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆಸಬೇಕು ಎಂದು ಹೈಕೋರ್ಟ್ ಆದೇಶವಿದೆ. ಆದೇಶದ ಪ್ರತಿಯನ್ನೂ ಪ್ರತಿಭಟನಕಾರರಿಗೆ ತೋರಿಸಲಾಗಿತ್ತು. ಆದರೂ ಪ್ರತಿಭಟನೆ ನಡೆಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಲಾಗಿದೆ’ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>