ಅವರು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆಯನ್ನು ಭಾನುವಾರ ಬಿಡುಗಡೆಗೊಳಿಸಿ ಮಾತನಾಡಿದರು. ವೇದವ್ಯಾಸ ಕಾಮತ್ ಶಾಸಕರಾದರೆ ದಕ್ಷಿಣ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳಾಗಲಿದ್ದು, ಬಾಕಿ ಉಳಿದ ಕಾರ್ಯಗಳಿಗೆ ವೇಗ ದೊರೆಯಲಿದೆ. ಮಂಗಳೂರಿನಿಂದ ಗೋವಾಕ್ಕೆ ಹಡಗು ಪ್ರವಾಸೋದ್ಯಮ ಅಭಿವೃದ್ಧಿ, ಇರುವ ನಾಲ್ಕು ಕುದ್ರುಗಳನ್ನು ಪಾರ್ಕ್ಗಳಾಗಿ ಅಭಿವೃದ್ಧಿ ಪಡಿಸುವುದು, ಅಂತರರಾಷ್ಟ್ರೀಯ ಮಟ್ಟದ ಗಾಲ್ಫ್ ಕೋರ್ಸ್ನ ಅಭಿವೃದ್ಧಿಪಡಿಸಲಾಗುವುದು ಎಂದರು.