ಪ್ರಶ್ನೋತ್ತರ ಕಲಾಪ ಮುಗಿದ ಬಳಿಕ ವಿಷಯ ಪ್ರಸ್ತಾಪಿಸಿದ ಬಿಜೆಪಿಯ ವಿ. ಸುನೀಲ್ ಕುಮಾರ್, ‘ಅಧಿವೇಶನ ನಡೆಯುತ್ತಿರುವಾಗ ಮುಖ್ಯಮಂತ್ರಿಯವರು ಯಾವುದೋ ಸಭೆ, ಸಮಾರಂಭದಲ್ಲಿ ₹ 10,000 ಕೋಟಿ ಅನುದಾನ ಘೋಷಿಸಿದ್ದಾರೆ. ಸದನಕ್ಕೆ ಬೆಲೆ ಇಲ್ಲವೆ? ಸದನದ ಹಕ್ಕುಚ್ಯುತಿ ಆಗಿದ್ದು, ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.