<p><strong>ಬೆಂಗಳೂರು:</strong> ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.</p><p>ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.</p>.<p>ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. </p><p>ಸಹ-ಉಸ್ತುವಾರಿಗಳಾಗಿ ರಾಜಸ್ಥಾನ ಬಿಜೆಪಿಯ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರದ ಬಿಜೆಪಿ ಶಾಸಕ ಸಂಜಯ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ.</p><p>ಬಿಜೆಪಿ ಚುನಾವಣಾ ಕಾರ್ಯತಂತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ರಾಮ್ ಮಾಧವ್ ಅವರು ಕಳೆದ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ರಾಮ್ ಮಾಧವ್ ಚುನಾವಣೆ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.</p>.ಜಿಬಿಎ ಚುನಾವಣೆಗೆ ತರಾತುರಿ ಏಕೆ?.ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ: ಇವಿಎಂ ಬದಲು ಮತಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಹುನಿರೀಕ್ಷಿತ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ.</p><p>ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಆದೇಶ ಹೊರಡಿಸಿದ್ದಾರೆ.</p>.<p>ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. </p><p>ಸಹ-ಉಸ್ತುವಾರಿಗಳಾಗಿ ರಾಜಸ್ಥಾನ ಬಿಜೆಪಿಯ ಸತೀಶ್ ಪೂನಿಯಾ ಹಾಗೂ ಮಹಾರಾಷ್ಟ್ರದ ಬಿಜೆಪಿ ಶಾಸಕ ಸಂಜಯ್ ಉಪಾಧ್ಯಾಯ ಅವರನ್ನು ನೇಮಕ ಮಾಡಲಾಗಿದೆ.</p><p>ಬಿಜೆಪಿ ಚುನಾವಣಾ ಕಾರ್ಯತಂತ್ರಗಳಲ್ಲಿ ಪ್ರಮುಖ ಪಾತ್ರವಹಿಸುತ್ತಿರುವ ರಾಮ್ ಮಾಧವ್ ಅವರು ಕಳೆದ ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದರು. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲೂ ರಾಮ್ ಮಾಧವ್ ಚುನಾವಣೆ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು.</p>.ಜಿಬಿಎ ಚುನಾವಣೆಗೆ ತರಾತುರಿ ಏಕೆ?.ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ: ಇವಿಎಂ ಬದಲು ಮತಪತ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>