‘ಚೈತ್ರಾ ಕುಂದಾಪುರ ವಂಚನೆ ಬಗ್ಗೆ ನನಗೆ ಮೊದಲೇ ಮಾಹಿತಿ ಇತ್ತು. ಜೊತೆಗೆ, ಅವರು ಯಾರಿಗೆಲ್ಲ ವಂಚನೆ ಮಾಡಿದ್ದಾರೆಂಬ ಮಾಹಿತಿ ನನ್ನ ಬಳಿ ಇದೆ’ ಎಂಬುದಾಗಿ ಸ್ವಾಮೀಜಿ ಪರಿಚಯಸ್ಥರ ಬಳಿ ಹೇಳಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲೂ ಸುದ್ದಿ ಬಂದಿತ್ತು. ಇದೇ ಕಾರಣಕ್ಕೆ ಅವರಿಗೆ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಬಂದು ಮಾಹಿತಿ ನೀಡುವಂತೆ ತಿಳಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ಹೇಳಿವೆ.