ಅದಕ್ಕೆ ಒಪ್ಪದ ಕಾರ್ಯಕರ್ತರು, ‘ವಿಧಾನಸೌಧದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಈಗ, ನಮ್ಮ ಯಾತ್ರೆ ತಡೆಯಲು ಬಂದಿದ್ದಿರಾ’ ಎಂದು ಪ್ರಶ್ನಿಸಿದರು. ಬಳಿಕ, ಕಾರ್ಯಕರ್ತರು ಹಾಗೂ ಪೊಲೀಸರು ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ 40ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು, ಬಿಎಂಟಿಸಿ ಬಸ್ಗಳಲ್ಲಿ ಕರೆದೊಯ್ದರು.