<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭಾನುವಾರ ಭೇಟಿ ಮಾಡಿ ಮಾತನಾಡಿದ ಅವರು, ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.</p>.<p>‘ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದೆ. ಈ ವಿಭಾಗದ ಐದು ಜಿಲ್ಲೆಗಳಲ್ಲಿ 9 ಸಮಾವೇಶ ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3,946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು’ ಎಂದು ತಿಳಿಸಿದರು.</p>.<p>‘ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜ್ಯದಲ್ಲಿ ಸಮರ್ಪಕ<br />ವಾಗಿ ಅನುಷ್ಠಾನ ಮಾಡಲಾಗಿದೆ. ರೈತರಿಗೆ ನನ್ನ ಬೆಳೆ ನನ್ನ ಹಕ್ಕು ಎಂಬ ಅಂಶವನ್ನು ಮನದಟ್ಟು ಮಾಡಿಕೊಡಲಾಗಿದೆ' ಎಂದು ಮಾಹಿತಿ ನೀಡಿದರು.</p>.<p>‘ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಕರ್ನಾಟಕದ ಪಾಲಿನ ₹4,750 ಕೋಟಿಯಲ್ಲಿ ಮೊದಲನೇ ಕಂತಿನ ರೂಪದಲ್ಲಿ ಸುಮಾರು ₹635 ಕೋಟಿ ಆರ್ಥಿಕ ನೆರವನ್ನು ಕರ್ನಾಟಕಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದರು.</p>.<p>ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ಹಾಗೂ ಎಪಿಎಂಸಿಗಳಿಂದ ದೇಣಿಗೆ ಸಂಗ್ರಹಿಸಿ, ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹53 ಕೋಟಿ ನೀಡಿದ್ದೇವೆ. ಕೊರೊನಾ ಸೇನಾನಿಗಳಾದ 42,540 ಆಶಾ ಕಾರ್ಯಕರ್ತೆಯರಿಗೆ ತಲಾ ₹3,000 ದಂತೆ ಒಟ್ಟು ₹12.75 ಕೋಟಿ ವಿತರಿಸಿದ್ದೇವೆ’ ಎಂದೂ ಅರುಣ್ ಸಿಂಗ್ ಅವರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಕಾವೇರಿ ಕೊಳ್ಳ ಪ್ರಾಂತ್ಯ, ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಹೆಚ್ಚು ಸ್ಥಾನ ಸಿಗಲಿದೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭಾನುವಾರ ಭೇಟಿ ಮಾಡಿ ಮಾತನಾಡಿದ ಅವರು, ಗ್ರಾಮ ಸ್ವರಾಜ್ಯ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು.</p>.<p>‘ಕಂದಾಯ ಸಚಿವ ಆರ್. ಅಶೋಕ್ ನೇತೃತ್ವದಲ್ಲಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮವನ್ನು ಮೈಸೂರು ವಿಭಾಗದಲ್ಲಿ ನಡೆಸಲಾಗಿದೆ. ಈ ವಿಭಾಗದ ಐದು ಜಿಲ್ಲೆಗಳಲ್ಲಿ 9 ಸಮಾವೇಶ ನಡೆಸಿದ್ದು, 40 ಮಂಡಲಗಳು ಭಾಗಿಯಾಗಿವೆ. ಈ ಕಾರ್ಯಕ್ರಮಗಳಲ್ಲಿ 3,946 ಶಕ್ತಿ ಮತ್ತು ಮಹಾ ಶಕ್ತಿ ಕೇಂದ್ರದ ಪ್ರಮುಖರು ಭಾಗವಹಿಸಿದ್ದರು’ ಎಂದು ತಿಳಿಸಿದರು.</p>.<p>‘ಎಪಿಎಂಸಿ ಕಾಯ್ದೆ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜ್ಯದಲ್ಲಿ ಸಮರ್ಪಕ<br />ವಾಗಿ ಅನುಷ್ಠಾನ ಮಾಡಲಾಗಿದೆ. ರೈತರಿಗೆ ನನ್ನ ಬೆಳೆ ನನ್ನ ಹಕ್ಕು ಎಂಬ ಅಂಶವನ್ನು ಮನದಟ್ಟು ಮಾಡಿಕೊಡಲಾಗಿದೆ' ಎಂದು ಮಾಹಿತಿ ನೀಡಿದರು.</p>.<p>‘ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಡಿ ಕರ್ನಾಟಕದ ಪಾಲಿನ ₹4,750 ಕೋಟಿಯಲ್ಲಿ ಮೊದಲನೇ ಕಂತಿನ ರೂಪದಲ್ಲಿ ಸುಮಾರು ₹635 ಕೋಟಿ ಆರ್ಥಿಕ ನೆರವನ್ನು ಕರ್ನಾಟಕಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ’ ಎಂದರು.</p>.<p>ಲಾಭದಲ್ಲಿರುವ ಸಹಕಾರ ಸಂಸ್ಥೆಗಳಿಂದ ಹಾಗೂ ಎಪಿಎಂಸಿಗಳಿಂದ ದೇಣಿಗೆ ಸಂಗ್ರಹಿಸಿ, ಕೋವಿಡ್ ಪರಿಹಾರ ಕಾರ್ಯಗಳಿಗಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹53 ಕೋಟಿ ನೀಡಿದ್ದೇವೆ. ಕೊರೊನಾ ಸೇನಾನಿಗಳಾದ 42,540 ಆಶಾ ಕಾರ್ಯಕರ್ತೆಯರಿಗೆ ತಲಾ ₹3,000 ದಂತೆ ಒಟ್ಟು ₹12.75 ಕೋಟಿ ವಿತರಿಸಿದ್ದೇವೆ’ ಎಂದೂ ಅರುಣ್ ಸಿಂಗ್ ಅವರಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>