‘ಕೊರೋನಾ ಸೋಂಕು ನಿಯಂತ್ರಣದಲ್ಲಿ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ರೈತ ವಿರೋಧಿ, ಕಾರ್ಮಿಕ ವಿರೋಧಿ ಹಾಗೂ ಮಹಿಳಾ ವಿರೋಧಿ ಮಸೂದೆಗಳನ್ನು ಮಂಡಿಸಿ ಉಳಿಗಮಾನ್ಯ ಪದ್ಧತಿ, ಜೀತಪದ್ಧತಿ ಮತ್ತು ವಸಾಹತುಶಾಹಿ ಪದ್ಧತಿಗಳ ಮರುಸ್ಥಾಪನೆಗೆ ಬಿಜೆಪಿ ಮುಂದಾಗಿದೆ. ಆಡಳಿತದ ಬಗ್ಗೆ ಜನ ಬೇಸತ್ತಿದ್ದಾರೆ. ಬಿಬಿಎಂಪಿ ಚುನಾವಣೆ ನಡೆದರೆ ಅಧಿಕಾರವನ್ನು ಹಿಡಿಯುವುದು ಅಸಾಧ್ಯ. ಕೂಡಲೇ ಬಿಬಿಎಂಪಿ ಚುನಾವಣೆ ನಡೆದರೆ ಹೀನಾಯವಾಗಿ ಸೋಲುವುದಾಗಿ ಬಿಜೆಪಿಯವರು ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಕಂಡುಬಂದಿದೆ. ಹಾಗಾಗಿಯೇ ಚುನಾವಣೆಯನ್ನು ಮುಂದೂಡಲು ಬಿಜೆಪಿ ವ್ಯವಸ್ಥಿತ ತಂತ್ರ ರೂಪಿಸಿದೆ’ ಎಂದು ದೂರಿದರು.