ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ವಿಧಿಸಿದ್ದ ದಂಡವನ್ನೇ ರಾಜ್ಯದಲ್ಲಿ ಜಾರಿಗೆ ತರುವುದಾಗಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದನ್ನು ಕಾಂಗ್ರೆಸ್ ನಾಯಕ ಪ್ರೊ.ಬಿ.ಕೆ.ಚಂದ್ರಶೇಖರ್ ಅವರು ಸ್ವಾಗತಿಸಿದ್ದಾರೆ.
‘ಉಲ್ಲಂಘನೆಗೆ ವಿಧಿಸುವ ದಂಡ ಲಿಖಿತ ರೂಪದಲ್ಲಿರುವ ನೋಟಿಸ್ ಮೂಲಕ ಮಾತ್ರವೇ ಸಂದಾಯವಾಗಬೇಕು ಎಂದು ನಿಯಮ ರೂಪಿಸಬೇಕು. ಇದರಿಂದ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಸ್ಥಳದಲ್ಲಿ ಕಾನೂನುಬಾಹಿರವಾಗಿ ಯಾವುದೇ ರೀತಿಯ ‘ಒಪ್ಪಂದ’ ಆಗಲು ಅವಕಾಶ ಇಲ್ಲ’ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.