‘ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಸೋನಿಯಾ ಗಾಂಧಿ ಘೋಷಿಸಿದ್ದಲ್ಲದೆ, 21 ದಿನಗಳ ಲಾಕ್ಡೌನ್ ಅಗತ್ಯವಿತ್ತು ಎಂದೂ ಪ್ರತಿಪಾದಿಸಿದ್ದರು. ಆದರೆ, ಈ ನಿರ್ಧಾರ ಕೈಗೊಳ್ಳುವ ಮುನ್ನ, ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿತ್ತು. ಇದರಿಂದ ಕೋಟ್ಯಂತರ ಕಾರ್ಮಿಕರ ಸಾವು–ನೋವು ತಪ್ಪಿಸಬಹುದಿತ್ತು ಎನ್ನುವುದು ಸೋನಿಯಾರ ಅಭಿಮತವಾಗಿತ್ತು’ ಎಂದು ಅವರು ಹೇಳಿದ್ದಾರೆ.