<p>ಬೆಂಗಳೂರು: ‘ಚಿತ್ರಕಲಾವಿದ ಬಿ.ಕೆ.ಎಸ್. ವರ್ಮಾ ಅವರ ಹೆಸರಿನಲ್ಲಿ ಕಲಾ ಗ್ಯಾಲರಿ ಅಥವಾ ಕಲಾಮಂದಿರ ನಿರ್ಮಾಣ ಮಾಡುವ ಅಗತ್ಯವಿದೆ. ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕೆಲಸವೂ ಅಗತ್ಯ’ ಎಂದು ಕಲಾವಿದ ಚಿ.ಸು. ಕೃಷ್ಣಸೆಟ್ಟಿ ಹೇಳಿದರು.</p>.<p>ಕಲಾಮಂದಿರ ಕಲಾಶಾಲೆ ಆಯೋಜಿಸಿದ್ದ ‘ಬಿ.ಕೆ.ಎಸ್.ವರ್ಮಾ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವರ್ಮಾ ಎಂದರೆ ವಿಶಿಷ್ಟ ವ್ಯಕ್ತಿತ್ವ. ಯಾರ ಕೃಪಾಶೀರ್ವಾದವೂ ಇಲ್ಲದೆ ಬೆಳೆದ ಕಲಾವಿದ. ಅವರು ಅಗಲಿದ ನಂತರವೂ ಕಲೆಯ ಮೂಲಕ ತಮ್ಮನ್ನು ನೆನಪಿಸಿಕೊಳ್ಳುವಂತಹ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ವರ್ಮಾ ಅವರ ಭುವನೇಶ್ವರಿ ಚಿತ್ರ ಈಗ ಎಲ್ಲ ಕನ್ನಡ ಕಾರ್ಯಕ್ರಮಗಳಲ್ಲೂ ಕಾಣಿಸುತ್ತದೆ. ಅದನ್ನು ಸರ್ಕಾರ ಅಧಿಕೃತಗೊಳಿಸಿದ್ದಿದ್ದರೆ ಅವರಿಗೆ ಸಿಗಬೇಕಾದ ಗೌರವ ಸಿಗುತ್ತಿತ್ತು. ಅವರು ನಿಧನರಾದಾಗ ಸರ್ಕಾರಿ ಗೌರವಗಳು ಸಲ್ಲಬೇಕಿತ್ತು. ಅವುಗಳನ್ನು ಕೊಡಿಸುವ ವಿಷಯದಲ್ಲಿ ನಾವೆಲ್ಲರೂ ಸೋತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಲಾವಿದ ಚಂದ್ರನಾಥ ಆಚಾರ್ಯ ಮಾತನಾಡಿ, ‘ಬಿ.ಕೆ.ಎಸ್.ವರ್ಮಾ ಅವರು ಕಲಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಮರೆಯುವಂತಿಲ್ಲ. ಅವರ ಹಾದಿಯಲ್ಲಿ ಮುನ್ನಡೆಯುವ ಕೆಲಸವನ್ನು ಯುವ ಕಲಾವಿದರು ಮಾಡಲಿ’ ಎಂದು ಆಶಿಸಿದರು.</p>.<p>‘ಬಿ.ಕೆ.ಎಸ್.ವರ್ಮಾ ಅವರ ಕಲಾಕೃತಿಗಳನ್ನು ಸಂಗ್ರಹಿಸಿಡುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ‘ಚಿತ್ರಕಲಾವಿದ ಬಿ.ಕೆ.ಎಸ್. ವರ್ಮಾ ಅವರ ಹೆಸರಿನಲ್ಲಿ ಕಲಾ ಗ್ಯಾಲರಿ ಅಥವಾ ಕಲಾಮಂದಿರ ನಿರ್ಮಾಣ ಮಾಡುವ ಅಗತ್ಯವಿದೆ. ಅವರ ಹೆಸರಿನಲ್ಲಿ ಪ್ರಶಸ್ತಿ ನೀಡುವ ಕೆಲಸವೂ ಅಗತ್ಯ’ ಎಂದು ಕಲಾವಿದ ಚಿ.ಸು. ಕೃಷ್ಣಸೆಟ್ಟಿ ಹೇಳಿದರು.</p>.<p>ಕಲಾಮಂದಿರ ಕಲಾಶಾಲೆ ಆಯೋಜಿಸಿದ್ದ ‘ಬಿ.ಕೆ.ಎಸ್.ವರ್ಮಾ ಒಂದು ನೆನಪು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ವರ್ಮಾ ಎಂದರೆ ವಿಶಿಷ್ಟ ವ್ಯಕ್ತಿತ್ವ. ಯಾರ ಕೃಪಾಶೀರ್ವಾದವೂ ಇಲ್ಲದೆ ಬೆಳೆದ ಕಲಾವಿದ. ಅವರು ಅಗಲಿದ ನಂತರವೂ ಕಲೆಯ ಮೂಲಕ ತಮ್ಮನ್ನು ನೆನಪಿಸಿಕೊಳ್ಳುವಂತಹ ಕೆಲಸ ಮಾಡಿದ್ದಾರೆ’ ಎಂದರು.</p>.<p>‘ವರ್ಮಾ ಅವರ ಭುವನೇಶ್ವರಿ ಚಿತ್ರ ಈಗ ಎಲ್ಲ ಕನ್ನಡ ಕಾರ್ಯಕ್ರಮಗಳಲ್ಲೂ ಕಾಣಿಸುತ್ತದೆ. ಅದನ್ನು ಸರ್ಕಾರ ಅಧಿಕೃತಗೊಳಿಸಿದ್ದಿದ್ದರೆ ಅವರಿಗೆ ಸಿಗಬೇಕಾದ ಗೌರವ ಸಿಗುತ್ತಿತ್ತು. ಅವರು ನಿಧನರಾದಾಗ ಸರ್ಕಾರಿ ಗೌರವಗಳು ಸಲ್ಲಬೇಕಿತ್ತು. ಅವುಗಳನ್ನು ಕೊಡಿಸುವ ವಿಷಯದಲ್ಲಿ ನಾವೆಲ್ಲರೂ ಸೋತಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>ಕಲಾವಿದ ಚಂದ್ರನಾಥ ಆಚಾರ್ಯ ಮಾತನಾಡಿ, ‘ಬಿ.ಕೆ.ಎಸ್.ವರ್ಮಾ ಅವರು ಕಲಾ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಮರೆಯುವಂತಿಲ್ಲ. ಅವರ ಹಾದಿಯಲ್ಲಿ ಮುನ್ನಡೆಯುವ ಕೆಲಸವನ್ನು ಯುವ ಕಲಾವಿದರು ಮಾಡಲಿ’ ಎಂದು ಆಶಿಸಿದರು.</p>.<p>‘ಬಿ.ಕೆ.ಎಸ್.ವರ್ಮಾ ಅವರ ಕಲಾಕೃತಿಗಳನ್ನು ಸಂಗ್ರಹಿಸಿಡುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಯೋಚಿಸಬೇಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>