<p><strong>ಬೆಂಗಳೂರು:</strong> ಪತಿಯನ್ನು ಕಪ್ಪು ಚರ್ಮದವನು ಎಂದು ಜರೆಯುತ್ತಿದ್ದ ಪತ್ನಿಯ ಧೋರಣೆಯನ್ನು ‘ಕ್ರೌರ್ಯ’ ಎಂದು ಪರಿಗಣಿಸಿರುವ ಹೈಕೋರ್ಟ್, ದಂಪತಿಯ ಮದುವೆಯನ್ನು ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ.</p>.<p>ವಿಚ್ಛೇದನ ಮಂಜೂರಾತಿಗೆ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ (ಈಗ ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಹಾಗೂ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಇತ್ತೀಚೆಗೆ ಈ ಆದೇಶ ನೀಡಿದ್ದು, ‘ಒಂದು ವೇಳೆ ಪತ್ನಿ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದರೆ ಕೌಟುಂಬಿಕ ನ್ಯಾಯಾಲಯ ಅದನ್ನು ಪರಿಶೀಲಿಸಿ ನಿರ್ಧರಿಸಬೇಕು‘ ಎಂದು ತಿಳಿಸಿದೆ.</p>.<p>‘ಸಕಾರಣ ಇಲ್ಲದಿದ್ದರೂ ಪತ್ನಿ, ಪತಿಯ ಜೊತೆ ವಾಸ ಮಾಡದೆ ತವರು ಮನೆ ಸೇರಿದ್ದಾರೆ. ಪತಿಯ ವಿರುದ್ಧ ಅಕ್ರಮ ಸಂಬಂಧದ ಸುಳ್ಳು ಆರೋಪ ಹೊರಿಸಿದ್ದಾರೆ. ಇದು ನಿಸ್ಸಂದೇಹವಾಗಿ ಕ್ರೌರ್ಯ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಪತಿಯನ್ನು ಕಪ್ಪು ಚರ್ಮದವನು ಎಂದು ಸದಾ ಹೀಯಾಳಿಸುವ ಮೂಲಕ ಪತ್ನಿ ಅವಮಾನ ಮಾಡಿರುವುದು ಈ ಪ್ರಕರಣದಲ್ಲಿ ನಿಚ್ಚಳವಾಗಿ ಕಂಡುಬಂದಿದೆ‘ ಎಂದು ಹೇಳಿರುವ ನ್ಯಾಯಪೀಠ, ಪತಿಗೆ ವಿಚ್ಛೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿದ್ದು, ಪತಿಯ ಮೇಲ್ಮನವಿ ಪುರಸ್ಕರಿಸಿ ವಿವಾಹ ಅನೂರ್ಜಿತಗೊಳಿಸಿ ವಿಚ್ಛೇದನ ಡಿಕ್ರಿ ಮಂಜೂರಾತಿಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪತಿಯನ್ನು ಕಪ್ಪು ಚರ್ಮದವನು ಎಂದು ಜರೆಯುತ್ತಿದ್ದ ಪತ್ನಿಯ ಧೋರಣೆಯನ್ನು ‘ಕ್ರೌರ್ಯ’ ಎಂದು ಪರಿಗಣಿಸಿರುವ ಹೈಕೋರ್ಟ್, ದಂಪತಿಯ ಮದುವೆಯನ್ನು ಅಸಿಂಧುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ.</p>.<p>ವಿಚ್ಛೇದನ ಮಂಜೂರಾತಿಗೆ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಪತಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ (ಈಗ ತೆಲಂಗಾಣ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ) ಹಾಗೂ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಇತ್ತೀಚೆಗೆ ಈ ಆದೇಶ ನೀಡಿದ್ದು, ‘ಒಂದು ವೇಳೆ ಪತ್ನಿ ಜೀವನಾಂಶ ಕೋರಿ ಅರ್ಜಿ ಸಲ್ಲಿಸಿದರೆ ಕೌಟುಂಬಿಕ ನ್ಯಾಯಾಲಯ ಅದನ್ನು ಪರಿಶೀಲಿಸಿ ನಿರ್ಧರಿಸಬೇಕು‘ ಎಂದು ತಿಳಿಸಿದೆ.</p>.<p>‘ಸಕಾರಣ ಇಲ್ಲದಿದ್ದರೂ ಪತ್ನಿ, ಪತಿಯ ಜೊತೆ ವಾಸ ಮಾಡದೆ ತವರು ಮನೆ ಸೇರಿದ್ದಾರೆ. ಪತಿಯ ವಿರುದ್ಧ ಅಕ್ರಮ ಸಂಬಂಧದ ಸುಳ್ಳು ಆರೋಪ ಹೊರಿಸಿದ್ದಾರೆ. ಇದು ನಿಸ್ಸಂದೇಹವಾಗಿ ಕ್ರೌರ್ಯ‘ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>‘ಪತಿಯನ್ನು ಕಪ್ಪು ಚರ್ಮದವನು ಎಂದು ಸದಾ ಹೀಯಾಳಿಸುವ ಮೂಲಕ ಪತ್ನಿ ಅವಮಾನ ಮಾಡಿರುವುದು ಈ ಪ್ರಕರಣದಲ್ಲಿ ನಿಚ್ಚಳವಾಗಿ ಕಂಡುಬಂದಿದೆ‘ ಎಂದು ಹೇಳಿರುವ ನ್ಯಾಯಪೀಠ, ಪತಿಗೆ ವಿಚ್ಛೇದನ ನಿರಾಕರಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಿದ್ದು, ಪತಿಯ ಮೇಲ್ಮನವಿ ಪುರಸ್ಕರಿಸಿ ವಿವಾಹ ಅನೂರ್ಜಿತಗೊಳಿಸಿ ವಿಚ್ಛೇದನ ಡಿಕ್ರಿ ಮಂಜೂರಾತಿಗೆ ಆದೇಶಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>