<p><strong>ಬೆಂಗಳೂರು:</strong> ಡೇರಿ ವೃತ್ತ ಸಮೀಪದ ರಂಗದಾಸಪ್ಪ ಲೇಔಟ್ನಲ್ಲಿ ಭಾನುವಾರ ರಾಸಾಯನಿಕ ಡಬ್ಬಿಯೊಂದು ಸ್ಫೋಟಗೊಂಡಿದ್ದು, ನರಸಿಂಹಯ್ಯ (48) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಸ್ಥಳೀಯ ಚಂದ್ರಪ್ಪನಗರದ ನಿವಾಸಿಯಾದ ನರಸಿಂಹಯ್ಯ, ಕಾಲೇಜೊಂದರ ವಸತಿ ನಿಲಯದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದುಕೊಂಡು ತಮ್ಮ ಮನೆಯತ್ತ ಹೋಗುವಾಗ ಈ ಘಟನೆ ನಡೆದಿದೆ. ಅವರ ಕಾಲಿಗೆ ತೀವ್ರ ಗಾಯಗಾಗಿದ್ದು, ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ರಂಗದಾಸಪ್ಪ ಲೇಔಟ್ನಲ್ಲಿ ಮೆಟ್ರೊ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಅದಕ್ಕಾಗಿ ಕಟ್ಟಡ ತೆರವು ಮಾಡಿ, ಅವಶೇಷವನ್ನು ರಸ್ತೆ ಬದಿಯಲ್ಲಿ ಹಾಕಲಾಗಿದೆ. ಅದೇ ಜಾಗದಲ್ಲೇ ಕೆಲವರು ಕಸವನ್ನೂ ಎಸೆದಿದ್ದಾರೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಹೇಳಿದರು.</p>.<p>‘ಮಾರ್ಬಲ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕವಿದ್ದ ಡಬ್ಬಿಯನ್ನು ಯಾರೋ ಸ್ಥಳದಲ್ಲಿ ಎಸೆದು ಹೋಗಿದ್ದರು. ಮಧ್ಯಾಹ್ನ ಬಿಸಿಲು ಹೆಚ್ಚಿದ್ದರಿಂದ ಡಬ್ಬಿ ಕಾದಿತ್ತು. ಅದೇ ಮಾರ್ಗವಾಗಿ ಹೊರಟಿದ್ದ ನರಸಿಂಹಯ್ಯ ಡಬ್ಬಿ ಮೇಲೆ ಕಾಲಿಟ್ಟಿದ್ದರು. ಕ್ಷಣ ಮಾತ್ರದಲ್ಲೇ ಡಬ್ಬಿ ಸ್ಫೋಟಗೊಂಡು ಅವರು ಮೇಲಕ್ಕೆ ಹಾರಿ ಬಿದ್ದರು.</p>.<p>ರಕ್ಷಣೆಗೆ ಬಂದ ಸ್ಥಳೀಯರೇ ಅವರನ್ನು ಆಟೊದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಘಟನೆ ಬಗ್ಗೆ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉದ್ದೇಶ ಪೂರ್ವಕವಾಗ ನಡೆದ ಘಟನೆ ಇದಲ್ಲವೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಡಬ್ಬಿ ಎಸೆದವರು ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ’ ಎಂದರು.</p>.<p>ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿನೇಂದ್ರ ಖಣಗಾವಿ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಆತಂಕ ಹುಟ್ಟಿಸಿದ ಸಂದೇಶ</strong><br />ಆರ್ಎಸ್ಎಸ್ ಮುಖಂಡರ ಹತ್ಯೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ಫೋಟ ಸಂಭವಿಸಿದ್ದರಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಹೀಗಾಗಿಯೇ ಪೊಲೀಸ್ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸ್ಫೋಟಗೊಂಡಿದ್ದು ರಾಸಾಯನಿಕ ಡಬ್ಬಿ ಎಂಬುದು ಗೊತ್ತಾಗುತ್ತಿದ್ದಂತೆ ನಿಟ್ಟುಸಿರು ಬಿಟ್ಟರು.</p>.<p>*<br />ಗ್ರಾನೈಟ್ ಕತ್ತರಿಸಲು ಬಳಸುವ ರಾಸಾಯನಿಕ ಡಬ್ಬಿ ಸ್ಫೋಟಗೊಂಡಿದೆ. ಜನರು ಯಾವುದೇ ಗಾಬರಿಪಡುವ ಅಗತ್ಯವಿಲ್ಲ.<br /><em><strong>-ಭಾಸ್ಕರ್ ರಾವ್, ನಗರ ಪೊಲೀಸ್ ಕಮಿಷನರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಡೇರಿ ವೃತ್ತ ಸಮೀಪದ ರಂಗದಾಸಪ್ಪ ಲೇಔಟ್ನಲ್ಲಿ ಭಾನುವಾರ ರಾಸಾಯನಿಕ ಡಬ್ಬಿಯೊಂದು ಸ್ಫೋಟಗೊಂಡಿದ್ದು, ನರಸಿಂಹಯ್ಯ (48) ಎಂಬುವರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಸ್ಥಳೀಯ ಚಂದ್ರಪ್ಪನಗರದ ನಿವಾಸಿಯಾದ ನರಸಿಂಹಯ್ಯ, ಕಾಲೇಜೊಂದರ ವಸತಿ ನಿಲಯದಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದುಕೊಂಡು ತಮ್ಮ ಮನೆಯತ್ತ ಹೋಗುವಾಗ ಈ ಘಟನೆ ನಡೆದಿದೆ. ಅವರ ಕಾಲಿಗೆ ತೀವ್ರ ಗಾಯಗಾಗಿದ್ದು, ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>‘ರಂಗದಾಸಪ್ಪ ಲೇಔಟ್ನಲ್ಲಿ ಮೆಟ್ರೊ ಮಾರ್ಗದ ಕಾಮಗಾರಿ ನಡೆಯುತ್ತಿದೆ. ಅದಕ್ಕಾಗಿ ಕಟ್ಟಡ ತೆರವು ಮಾಡಿ, ಅವಶೇಷವನ್ನು ರಸ್ತೆ ಬದಿಯಲ್ಲಿ ಹಾಕಲಾಗಿದೆ. ಅದೇ ಜಾಗದಲ್ಲೇ ಕೆಲವರು ಕಸವನ್ನೂ ಎಸೆದಿದ್ದಾರೆ’ ಎಂದು ಆಗ್ನೇಯ ವಿಭಾಗದ ಡಿಸಿಪಿ ಶ್ರೀನಾಥ್ ಜೋಶಿ ಹೇಳಿದರು.</p>.<p>‘ಮಾರ್ಬಲ್ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕವಿದ್ದ ಡಬ್ಬಿಯನ್ನು ಯಾರೋ ಸ್ಥಳದಲ್ಲಿ ಎಸೆದು ಹೋಗಿದ್ದರು. ಮಧ್ಯಾಹ್ನ ಬಿಸಿಲು ಹೆಚ್ಚಿದ್ದರಿಂದ ಡಬ್ಬಿ ಕಾದಿತ್ತು. ಅದೇ ಮಾರ್ಗವಾಗಿ ಹೊರಟಿದ್ದ ನರಸಿಂಹಯ್ಯ ಡಬ್ಬಿ ಮೇಲೆ ಕಾಲಿಟ್ಟಿದ್ದರು. ಕ್ಷಣ ಮಾತ್ರದಲ್ಲೇ ಡಬ್ಬಿ ಸ್ಫೋಟಗೊಂಡು ಅವರು ಮೇಲಕ್ಕೆ ಹಾರಿ ಬಿದ್ದರು.</p>.<p>ರಕ್ಷಣೆಗೆ ಬಂದ ಸ್ಥಳೀಯರೇ ಅವರನ್ನು ಆಟೊದಲ್ಲಿ ಆಸ್ಪತ್ರೆಗೆ ಸೇರಿಸಿದ್ದಾರೆ’ ಎಂದು ತಿಳಿಸಿದರು.</p>.<p>‘ಘಟನೆ ಬಗ್ಗೆ ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಉದ್ದೇಶ ಪೂರ್ವಕವಾಗ ನಡೆದ ಘಟನೆ ಇದಲ್ಲವೆಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಡಬ್ಬಿ ಎಸೆದವರು ಯಾರು ಎಂಬುದನ್ನು ಪತ್ತೆ ಮಾಡುತ್ತಿದ್ದೇವೆ’ ಎಂದರು.</p>.<p>ಘಟನಾ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಹಾಗೂ ಆಂತರಿಕ ಭದ್ರತಾ ವಿಭಾಗದ ಎಸ್ಪಿ ಜಿನೇಂದ್ರ ಖಣಗಾವಿ ಭೇಟಿ ನೀಡಿ ಪರಿಶೀಲಿಸಿದರು.</p>.<p><strong>ಆತಂಕ ಹುಟ್ಟಿಸಿದ ಸಂದೇಶ</strong><br />ಆರ್ಎಸ್ಎಸ್ ಮುಖಂಡರ ಹತ್ಯೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಯುವ ಬಗ್ಗೆ ಕೇಂದ್ರ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸ್ಫೋಟ ಸಂಭವಿಸಿದ್ದರಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.</p>.<p>ಹೀಗಾಗಿಯೇ ಪೊಲೀಸ್ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಸ್ಫೋಟಗೊಂಡಿದ್ದು ರಾಸಾಯನಿಕ ಡಬ್ಬಿ ಎಂಬುದು ಗೊತ್ತಾಗುತ್ತಿದ್ದಂತೆ ನಿಟ್ಟುಸಿರು ಬಿಟ್ಟರು.</p>.<p>*<br />ಗ್ರಾನೈಟ್ ಕತ್ತರಿಸಲು ಬಳಸುವ ರಾಸಾಯನಿಕ ಡಬ್ಬಿ ಸ್ಫೋಟಗೊಂಡಿದೆ. ಜನರು ಯಾವುದೇ ಗಾಬರಿಪಡುವ ಅಗತ್ಯವಿಲ್ಲ.<br /><em><strong>-ಭಾಸ್ಕರ್ ರಾವ್, ನಗರ ಪೊಲೀಸ್ ಕಮಿಷನರ್</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>