ಸಂಘದ ಅಧ್ಯಕ್ಷ ವೀರಕ್ಯಾತಯ್ಯ ಅಧ್ಯಕ್ಷತೆಯಲ್ಲಿ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವವರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿಗೆ ಡಿ.7 ಕಡೆಯ ದಿನವಾಗಿದೆ. ಕೋವಿಡ್ ಕಾರಣದಿಂದ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಸದಸ್ಯರು ಸಭೆ ವೇಳೆ ಪಾಲಿಸಬೇಕು. ಕೋವಿಡ್ ಸೋಂಕಿತ ಸದಸ್ಯರಿಗೆ ಸಭೆಗೆ ಹಾಜರಾಗಲು ವಿನಾಯಿತಿ ಇದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 88673 60940 ಮತ್ತು ksecsb.kar@gmail.com ಸಂಪರ್ಕಿಸಲು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎನ್. ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.