ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾನ್ಯ ಸಭೆ

Last Updated 30 ನವೆಂಬರ್ 2020, 22:08 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಅಂಧ ನೌಕರರ ಸಹಕಾರ ಸಂಘದ 2020–21ನೇ ಸಾಲಿನ ಸಾಮಾನ್ಯ ಸಭೆ ಡಿ.13ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆ ತನಕ ನಡೆಯಲಿದೆ.

ಸಂಘದ ಅಧ್ಯಕ್ಷ ವೀರಕ್ಯಾತಯ್ಯ ಅಧ್ಯಕ್ಷತೆಯಲ್ಲಿ ಗಾಂಧಿ ಭವನದ ಬಾಪು ಸಭಾಂಗಣದಲ್ಲಿ ನಡೆಯಲಿರುವ ಸಭೆಗೆ ಹಾಜರಾಗುವವರು ನೋಂದಣಿ ಮಾಡಿಕೊಳ್ಳುವುದು ಕಡ್ಡಾಯ. ನೋಂದಣಿಗೆ ಡಿ.7 ಕಡೆಯ ದಿನವಾಗಿದೆ. ಕೋವಿಡ್‌ ಕಾರಣದಿಂದ ಸರ್ಕಾರ ಹೊರಡಿಸಿರುವ ಸುರಕ್ಷತಾ ಕ್ರಮಗಳನ್ನು ಸದಸ್ಯರು ಸಭೆ ವೇಳೆ ಪಾಲಿಸಬೇಕು. ಕೋವಿಡ್‌ ಸೋಂಕಿತ ಸದಸ್ಯರಿಗೆ ಸಭೆಗೆ ಹಾಜರಾಗಲು ವಿನಾಯಿತಿ ಇದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 88673 60940 ಮತ್ತು ksecsb.kar@gmail.com ಸಂಪರ್ಕಿಸಲು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್‌.ಎನ್. ಆನಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT