‘ಅಸ್ಸಾಂನಲ್ಲೂ ಎಬಿಟಿ ತಂಡವನ್ನು ಕಟ್ಟಲು ಮುಂದಾಗಿದ್ದ ಫೈಜಲ್, ಅದಕ್ಕಾಗಿ ಸ್ಥಳೀಯ ಯುವಕರನ್ನು ನೇಮಿಸಿಕೊಳ್ಳುತ್ತಿದ್ದ. ಅವರಿಗೆ ಧರ್ಮದ ಪಾಠ ಮಾಡಿ, ಭಯೋತ್ಪಾದನಾ ಕೃತ್ಯದಲ್ಲಿ ತೊಡಗಲು ಪ್ರಚೋದಿಸುತ್ತಿದ್ದ. ಆತನ ಸುಳಿವು ಪತ್ತೆ ಮಾಡಿದ್ದ ಬಾಂಗ್ಲಾ ಪೊಲೀಸರು, ಅಸ್ಸಾಂನಲ್ಲಿ ಹುಡುಕಾಟ ಆರಂಭಿಸಿದ್ದರು. ಅದು ತಿಳಿಯುತ್ತಿದ್ದಂತೆ ಫೈಜಲ್ ಬೆಂಗಳೂರಿಗೆ ಬಂದು ಬೊಮ್ಮನಹಳ್ಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ. ಕ್ಯಾಬ್ ಚಾಲಕನಾಗಿ ಕೆಲಸ ಆರಂಭಿಸಿದ್ದ.’