ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಕ್ತದಾನ ಶಿಬಿರ: 487 ಯುನಿಟ್‌ ರಕ್ತ ಸಂಗ್ರಹ

ಉಪನಗರದಲ್ಲಿ ವೇಮನರ 612 ನೇ ಜಯಂತ್ಯುತ್ಸವ
Published 27 ಜನವರಿ 2024, 0:20 IST
Last Updated 27 ಜನವರಿ 2024, 0:20 IST
ಅಕ್ಷರ ಗಾತ್ರ

ಯಲಹಂಕ: ಮಹಾಯೋಗಿ ವೇಮನರ ತತ್ವಾದರ್ಶಗಳು ಸಾರ್ವಕಾಲಿಕವಾಗಿದ್ದು, ಅವರು ಸಮಾಜಕ್ಕೆ ನೀಡಿದ ಸಂದೇಶ ಮತ್ತು ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಶಾಸಕ ಎಸ್.ಆರ್‌.ವಿಶ್ವನಾಥ್‌ ಹೇಳಿದರು.

ಮಹಾಯೋಗಿ ವೇಮನ ಸೌಹಾರ್ದ ಪತ್ತಿನ ಸಹಕಾರಿ ಸಂಘ ಹಾಗೂ ಬೆಂಗಳೂರು ಉತ್ತರ ವಲಯದ ರೆಡ್ಡಿ ಜನಸಂಘದ ಆಶ್ರಯದಲ್ಲಿ ಮಹಾಯೋಗಿ ವೇಮನರ 612 ನೇ ಜಯಂತ್ಯುತ್ಸವದ ಪ್ರಯುಕ್ತ ಉಪನಗರದಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ವೇಮನರು ಶ್ರೀಮಂತ ಕುಟುಂಬದಲ್ಲಿ ಜನಿಸಿದ್ದರೂ, ಜೀವನ ನಶ್ವರವೆಂದು ಸರ್ವಸಂಘ ಪರಿತ್ಯಾಗಿಯಾಗಿ ಸಮಾಜಕ್ಕೆ ಸತ್ಸಂದೇಶ ಸಾರಿದರು. ಅಂತಹ ಮಹಾಪುರುಷರ ಹೆಸರಿನಲ್ಲಿ ರಕ್ತದಾನ ಶಿಬಿರ ಆಯೋಜಿಸಿರುವುದು ಶ್ಲಾಘನೀಯ‘ ಎಂದರು.

ಶಿಬಿರದಲ್ಲಿ ಕಾಲೇಜು ವಿದ್ಯಾರ್ಥಿಗಳು, ಪೊಲೀಸ್‌ ಸಿಬ್ಬಂದಿ, ಉಪನ್ಯಾಸಕರು ಸೇರಿ ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ದಾನಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. 487 ಯುನಿಟ್‌ ರಕ್ತ ಸಂಗ್ರಹಿಸಲಾಯಿತು.

ಸಂಘದ ಅಧ್ಯಕ್ಷ ಎಂ.ಮುನಿರೆಡ್ಡಿ, ಉಪಾಧ್ಯಕ್ಷ ಎಸ್‌.ಎನ್‌.ಸಂಪತ್‌ಕುಮಾರ್‌, ನಿರ್ದೇಶಕರಾದ ಎಂ.ಮೋಹನ್‌ಕುಮಾರ್‌, ಎಸ್‌.ಜಿ.ನರಸಿಂಹಮೂರ್ತಿ, ಎಚ್‌.ರಾಜಣ್ಣ, ಶ್ರೀನಿವಾಸ್‌, ಅರುಣ ಪ್ರಕಾಶ್‌, ಗೀತಾ.ಬಿ.ಎಂ, ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಂ.ಸತೀಶ್‌, ಚೊಕ್ಕನಹಳ್ಳಿ ವೆಂಕಟೇಶ್‌, ಟಿ.ಮುನಿರೆಡ್ಡಿ, ಅದ್ದೆ ವಿಶ್ವನಾಥಪುರ ಮಂಜುನಾಥ್‌, ಎಸ್‌.ಜಿ.ಪ್ರಶಾಂತ್‌ ರೆಡ್ಡಿ, ಸೂರ್ಯನಾರಾಯಣ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT