<p><strong>ಬೆಂಗಳೂರು</strong>: ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕ ಹಾಗೂ ವಿವಿಧ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಒಟ್ಟು 1,007 ಯೂನಿಟ್ ರಕ್ತ ಸಂಗ್ರಹಿಸಲಾಯಿತು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸಜೀತ್, ‘ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕಗಳ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಯೂ ಶಿಬಿರಗಳನ್ನು ಹಮ್ಮಿಕೊಂಡರೆ ಅನುಭವ ಮತ್ತಷ್ಟು ಹೆಚ್ಚಳವಾಗಲಿದೆ’ ಎಂದು ಸಲಹೆ ನೀಡಿದರು.</p>.<p>ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ಎರಡು ದಶಕಗಳಲ್ಲಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬೇರೆಯವರ ಬಗ್ಗೆ ಸಹನೆ, ಕಾಳಜಿ ಇಲ್ಲವಾಗಿದೆ. ಸ್ವಾರ್ಥ ಮನೋಭಾವ ಬೆಳೆದು ಸೇವಾ ಮನೋಭಾವ ಕ್ಷೀಣಿಸುತ್ತಿದೆ’ ಎಂದರು.</p>.<p>ಕಾಲೇಜಿನ ಒಂದು ಸಾವಿರ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಎಚ್.ವಿ. ಪಾರ್ಶ್ವನಾಥ್, ಹಣಕಾಸು ವಿಭಾಗದ ಮುಖ್ಯಸ್ಥ ಜಿ. ರಾಮಚಂದ್ರ, ಪ್ರಾಂಶುಪಾಲ ಎನ್.ವಿ.ಆರ್. ನಾಯ್ಡು ಮತ್ತು ಎನ್ಎಸ್ಎಸ್ ಘಟಕದ ಮುಖ್ಯಸ್ಥ ಪುಟ್ಟಬೋರೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನಾ (ಎನ್ಎಸ್ಎಸ್) ಘಟಕ ಹಾಗೂ ವಿವಿಧ ರೋಟರಿ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ಒಟ್ಟು 1,007 ಯೂನಿಟ್ ರಕ್ತ ಸಂಗ್ರಹಿಸಲಾಯಿತು.</p>.<p>ಶಿಬಿರ ಉದ್ಘಾಟಿಸಿ ಮಾತನಾಡಿದ ಈಶಾನ್ಯ ವಿಭಾಗದ ಡಿಸಿಪಿ ವಿ.ಜೆ. ಸಜೀತ್, ‘ಎನ್ಎಸ್ಎಸ್ ಮತ್ತು ಎನ್ಸಿಸಿ ಘಟಕಗಳ ವಿದ್ಯಾರ್ಥಿಗಳು ಗ್ರಾಮೀಣ ಭಾಗದಲ್ಲಿಯೂ ಶಿಬಿರಗಳನ್ನು ಹಮ್ಮಿಕೊಂಡರೆ ಅನುಭವ ಮತ್ತಷ್ಟು ಹೆಚ್ಚಳವಾಗಲಿದೆ’ ಎಂದು ಸಲಹೆ ನೀಡಿದರು.</p>.<p>ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಮಾತನಾಡಿ, ‘ಎರಡು ದಶಕಗಳಲ್ಲಿ ಸಮಾಜದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಬೇರೆಯವರ ಬಗ್ಗೆ ಸಹನೆ, ಕಾಳಜಿ ಇಲ್ಲವಾಗಿದೆ. ಸ್ವಾರ್ಥ ಮನೋಭಾವ ಬೆಳೆದು ಸೇವಾ ಮನೋಭಾವ ಕ್ಷೀಣಿಸುತ್ತಿದೆ’ ಎಂದರು.</p>.<p>ಕಾಲೇಜಿನ ಒಂದು ಸಾವಿರ ವಿದ್ಯಾರ್ಥಿಗಳು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಎಚ್.ವಿ. ಪಾರ್ಶ್ವನಾಥ್, ಹಣಕಾಸು ವಿಭಾಗದ ಮುಖ್ಯಸ್ಥ ಜಿ. ರಾಮಚಂದ್ರ, ಪ್ರಾಂಶುಪಾಲ ಎನ್.ವಿ.ಆರ್. ನಾಯ್ಡು ಮತ್ತು ಎನ್ಎಸ್ಎಸ್ ಘಟಕದ ಮುಖ್ಯಸ್ಥ ಪುಟ್ಟಬೋರೇಗೌಡ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>