<p><strong>ಬೆಂಗಳೂರು:</strong> ‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರಕೋಶ ನೆರವಾಗುತ್ತದೆ. ಶೇ 30 ರಷ್ಟು ರೋಗಿಗಳಿಗೆ ಮಾತ್ರ ಕುಟುಂಬದ ಸದಸ್ಯರಿಂದ ಈ ರಕ್ತದ ಆಕರಕೋಶ ಲಭ್ಯವಾಗುತ್ತಿದೆ’ ಎಂದು ನಾರಾಯಣ ಹೆಲ್ತ್ನ ಕಸಿ ತಜ್ಞ ಡಾ.ಸುನೀಲ್ ಭಟ್ ಕಳವಳ ವ್ಯಕ್ತಪಡಿಸಿದರು.</p>.<p>ರಕ್ತದ ಆಕರಕೋಶ ದಾನಿಗಳ ನೋಂದಣಿ ಸೇವಾ ಸಂಸ್ಥೆ ‘ಡಿಕೆಎಂಎಸ್-ಬಿಎಂಎಸ್ಟಿ ಫೌಂಡೇಷನ್’ ನಗರದಲ್ಲಿ ಗುರುವಾರ ಹಮ್ಮಿಕೊಂಡ ವಿಶ್ವ ರಕ್ತ ಕ್ಯಾನ್ಸರ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಕ್ತದ ಕ್ಯಾನ್ಸರ್ ಎದುರಿಸುತ್ತಿರುವವರಲ್ಲಿ ಶೇ 70 ರಷ್ಟು ರೋಗಿಗಳಿಗೆ ದಾನಿಗಳನ್ನು ಹುಡುಕಬೇಕಾಗುತ್ತದೆ ದೇಶದಲ್ಲಿ ರಕ್ತದ ಆಕರ ಕೋಶದಾನಿಗಳಾಗಿ ಕೇವಲ 5 ಲಕ್ಷ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆ. ದೇಶದಲ್ಲಿ ಪ್ರತಿ ವರ್ಷ 70 ಸಾವಿರ ಮಂದಿ ಮೃತಪಡುತ್ತಿದ್ದಾರೆ. 1 ಲಕ್ಷಕ್ಕೂ ಅಧಿಕ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ರಕ್ತ ಕ್ಯಾನ್ಸರ್ನಿಂದ ಬಳಲುತ್ತಿರುವ ರೋಗಿಗಳನ್ನು ಕಾಪಾಡಲು ರಕ್ತದ ಆಕರಕೋಶ ನೆರವಾಗುತ್ತದೆ. ಶೇ 30 ರಷ್ಟು ರೋಗಿಗಳಿಗೆ ಮಾತ್ರ ಕುಟುಂಬದ ಸದಸ್ಯರಿಂದ ಈ ರಕ್ತದ ಆಕರಕೋಶ ಲಭ್ಯವಾಗುತ್ತಿದೆ’ ಎಂದು ನಾರಾಯಣ ಹೆಲ್ತ್ನ ಕಸಿ ತಜ್ಞ ಡಾ.ಸುನೀಲ್ ಭಟ್ ಕಳವಳ ವ್ಯಕ್ತಪಡಿಸಿದರು.</p>.<p>ರಕ್ತದ ಆಕರಕೋಶ ದಾನಿಗಳ ನೋಂದಣಿ ಸೇವಾ ಸಂಸ್ಥೆ ‘ಡಿಕೆಎಂಎಸ್-ಬಿಎಂಎಸ್ಟಿ ಫೌಂಡೇಷನ್’ ನಗರದಲ್ಲಿ ಗುರುವಾರ ಹಮ್ಮಿಕೊಂಡ ವಿಶ್ವ ರಕ್ತ ಕ್ಯಾನ್ಸರ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ರಕ್ತದ ಕ್ಯಾನ್ಸರ್ ಎದುರಿಸುತ್ತಿರುವವರಲ್ಲಿ ಶೇ 70 ರಷ್ಟು ರೋಗಿಗಳಿಗೆ ದಾನಿಗಳನ್ನು ಹುಡುಕಬೇಕಾಗುತ್ತದೆ ದೇಶದಲ್ಲಿ ರಕ್ತದ ಆಕರ ಕೋಶದಾನಿಗಳಾಗಿ ಕೇವಲ 5 ಲಕ್ಷ ಮಂದಿ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಪಾಶ್ಚಾತ್ಯ ದೇಶಗಳಿಗೆ ಹೋಲಿಸಿದರೆ ಇದು ತೀರಾ ಕಡಿಮೆ. ದೇಶದಲ್ಲಿ ಪ್ರತಿ ವರ್ಷ 70 ಸಾವಿರ ಮಂದಿ ಮೃತಪಡುತ್ತಿದ್ದಾರೆ. 1 ಲಕ್ಷಕ್ಕೂ ಅಧಿಕ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>