ಡಿಕೆಎಂಎಸ್ ಬಿಎಂಎಸ್ಟಿ ಫೌಂಡೇಷನ್ ಇಂಡಿಯಾ ಸಂಸ್ಥೆಯು ಬ್ಲಡ್ ಸ್ಟೆಮ್ ಸೆಲ್ ದಾನದ ಕುರಿತು ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ರಕ್ತ ಕ್ಯಾನ್ಸರ್ನಿಂದ ನರಳುತ್ತಿರುವ ರೋಗಿಗಳಿಗೆ ಬದುಕುವ ಎರಡನೇ ಅವಕಾಶವಾಗಿ ಇರುವ ಒಂದೇ ಆಸರೆ ಎಂದರೆ ರಕ್ತ ಆಕರ ಕೋಶ ದಾನ ಮಾಡುವುದು. ದಾನಿಗಳ ರಕ್ತದಿಂದ ಆಕರ ಕೋಶಗಳನ್ನು ಪಡೆದು ಅಸ್ಥಿಮಜ್ಜೆ ಹಾಳಾಗಿರುವಂತಹ ರೋಗಿಗಳಿಗೆ ಕಸಿ ಮಾಡಲಾಗುತ್ತದೆ. ಇದು ಅಗತ್ಯವಿರುವಂತಹ ರೋಗಿಗಳ ಕುಟುಂಬದಲ್ಲಿ ಹೊಂದಾಣಿಕೆಯಾಗಬಲ್ಲ ದಾನಿಗಳು ಸಿಗುವುದು ಶೇ 40 ಮಾತ್ರ. ಉಳಿದವರು ಸಂಬಂಧಿಗಳಲ್ಲದ ದಾನಿಗಳ ಮೇಲೆ ಅವಲಂಬಿತರಾಗಬೇಕಾಗುತ್ತದೆ’ ಎಂದರು.