<p><strong>ಬೆಂಗಳೂರು</strong>: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಬಿಎಂಸಿಆರ್ಐ) ಆವರಣದಲ್ಲಿ ಜುಲೈ 5ರಂದು ಉದ್ಘಾಟನೆಗೊಂಡ ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋಎಂಟರಾಲಜಿ ಮತ್ತು ಯಕೃತ್ತು ಕಸಿ ವಿಭಾಗವನ್ನು ಇನ್ನೂ ಕಾರ್ಯಗತಗೊಳಿಸದ ರಾಜ್ಯ ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ವಕೀಲ ಎಂ.ಎನ್.ಉಮೇಶ್ ಅವರು ದಾಖಲಿಸಿರುವ ನಾಗರಿಕ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ತಿ ಮತ್ತು ನ್ಯಾಯಮುರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಸಂಸ್ಥೆಯ ನಿರ್ದೇಶಕ ಡಾ.ನಾಗೇಶ್ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಜ್ಯೋತಿ ಪ್ರಕಾಶ್ ಅವರು ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿದ್ದರು. ‘ನಿಯಮಾನುಸಾರ ಸ್ಯಾನಿಟೈಸ್ ಮಾಡದ ಹೊರತು ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ. ಇನ್ನೂ ಎರಡು ತಿಂಗಳ ಕಾಲ ಶುಚಿಗೊಳಿಸಬೇಕು’ ಎಂದು ನಿರ್ದೇಶಕರು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಇಂತಹ ವಿಳಂಬವು ಬಡವರ ಜೀವಕ್ಕೆ ಅಪಾಯ ಉಂಟು ಮಾಡುತ್ತದೆಯೇ ಹೊರತು ಬೇರೇನೂ ಅಲ್ಲ’ ಎಂದು ನ್ಯಾಯಾಲಯವು ಮೌಖಿಕವಾಗಿ ಅಭಿಪ್ರಾಯಪಟ್ಟಿತು.</p>.<p>‘ಸ್ವಚ್ಛಗೊಳಿಸುವ ಕೆಲಸವನ್ನು ಈವರೆಗೆ ಕೈಗೊಂಡಿಲ್ಲ. ಅದಕ್ಕೂ ನ್ಯಾಯಾಲಯದಿಂದ ಕಾಲಾವಕಾಶ ನೀಡುವ ತನಕ ಕಾಯುವುದೇಕೆ? ಇದನ್ನು ಗಮನಿಸಿದರೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳ ಕಾರ್ಯ ವೈಖರಿ ತೀರ ಹೀನಾಯವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>ಮುಂದಿನ ವಿಚಾರಣೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ(ಬಿಎಂಸಿಆರ್ಐ) ಆವರಣದಲ್ಲಿ ಜುಲೈ 5ರಂದು ಉದ್ಘಾಟನೆಗೊಂಡ ಶಸ್ತ್ರಚಿಕಿತ್ಸಾ ಗ್ಯಾಸ್ಟ್ರೋಎಂಟರಾಲಜಿ ಮತ್ತು ಯಕೃತ್ತು ಕಸಿ ವಿಭಾಗವನ್ನು ಇನ್ನೂ ಕಾರ್ಯಗತಗೊಳಿಸದ ರಾಜ್ಯ ಸರ್ಕಾರ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.</p>.<p>ವಕೀಲ ಎಂ.ಎನ್.ಉಮೇಶ್ ಅವರು ದಾಖಲಿಸಿರುವ ನಾಗರಿಕ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ ಅವಸ್ತಿ ಮತ್ತು ನ್ಯಾಯಮುರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.</p>.<p>ಸಂಸ್ಥೆಯ ನಿರ್ದೇಶಕ ಡಾ.ನಾಗೇಶ್ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಜ್ಯೋತಿ ಪ್ರಕಾಶ್ ಅವರು ನ್ಯಾಯಾಲಯಕ್ಕೆ ಬುಧವಾರ ಹಾಜರಾಗಿದ್ದರು. ‘ನಿಯಮಾನುಸಾರ ಸ್ಯಾನಿಟೈಸ್ ಮಾಡದ ಹೊರತು ಕಾರ್ಯಾರಂಭ ಮಾಡಲು ಸಾಧ್ಯವಿಲ್ಲ. ಇನ್ನೂ ಎರಡು ತಿಂಗಳ ಕಾಲ ಶುಚಿಗೊಳಿಸಬೇಕು’ ಎಂದು ನಿರ್ದೇಶಕರು ತಿಳಿಸಿದರು.</p>.<p>‘ರಾಜ್ಯ ಸರ್ಕಾರದ ಇಂತಹ ವಿಳಂಬವು ಬಡವರ ಜೀವಕ್ಕೆ ಅಪಾಯ ಉಂಟು ಮಾಡುತ್ತದೆಯೇ ಹೊರತು ಬೇರೇನೂ ಅಲ್ಲ’ ಎಂದು ನ್ಯಾಯಾಲಯವು ಮೌಖಿಕವಾಗಿ ಅಭಿಪ್ರಾಯಪಟ್ಟಿತು.</p>.<p>‘ಸ್ವಚ್ಛಗೊಳಿಸುವ ಕೆಲಸವನ್ನು ಈವರೆಗೆ ಕೈಗೊಂಡಿಲ್ಲ. ಅದಕ್ಕೂ ನ್ಯಾಯಾಲಯದಿಂದ ಕಾಲಾವಕಾಶ ನೀಡುವ ತನಕ ಕಾಯುವುದೇಕೆ? ಇದನ್ನು ಗಮನಿಸಿದರೆ ಉದ್ದೇಶ ಪೂರ್ವಕವಾಗಿ ವಿಳಂಬ ಮಾಡಲಾಗುತ್ತಿದೆ. ಅಧಿಕಾರಿಗಳ ಕಾರ್ಯ ವೈಖರಿ ತೀರ ಹೀನಾಯವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿತು.</p>.<p>ಮುಂದಿನ ವಿಚಾರಣೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಾಗಬೇಕು ಎಂದು ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>