ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಕೆ.ಎನ್. ಲಿಂಗೇಗೌಡ, ‘ಬಿಎಂಐಸಿ ಯೋಜನೆಗಾಗಿ ಬೆಂಗಳೂರು ಉತ್ತರ ಮತ್ತು ದಕ್ಷಿಣ ತಾಲ್ಲೂಕಿನ ಹಲವಾರು ಗ್ರಾಮಗಳಲ್ಲಿ ಭೂಸ್ವಾಧೀನ ಪಡಿಸಿಕೊಳ್ಳಲಾಗಿತ್ತು. 2003ರ ಆ.22ರಂದು ನಡೆದ ಸಭೆಯಲ್ಲಿ ರೈತರಿಗೆ ಭೂಪರಿಹಾರ ನೀಡಲಾಗಿತ್ತು. ಇದರೊಂದಿಗೆ ನಿವೇಶನವನ್ನೂ ನೀಡುವ ಭರವಸೆ ನೀಡಲಾಗಿತ್ತು. ಅದನ್ನು ಇನ್ನೂ ಈಡೇರಿಸಿಲ್ಲ’ ಎಂದು ದೂರಿದರು.