‘ಸಾಲಗಾರರ ಕಾಟ ಹೆಚ್ಚಾಗಿತ್ತು. ಮಾನಸಿಕವಾಗಿ ನೊಂದ ವಸಂತಾ, ಮಕ್ಕಳ ಜೊತೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಈ ಸಾವಿಗೆ ನಾವೇ ಕಾರಣ. ನನ್ನ ಪತಿಯನ್ನು ಕಳೆದುಕೊಂಡ ನೋವಿನಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನವರು ಅಂತ ಯಾರೂ ಇಲ್ಲ. ಈ ಮನೆ ಮಾರಾಟ ಮಾಡಿ, ಸಾಲ ತೀರಿಸಿ’ ಎಂಬುದಾಗಿ ವಸಂತಾ ಮರಣಪತ್ರ ಬರೆದಿದ್ದಾರೆ. ಅದನ್ನು ಸುಪರ್ದಿಗೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ಪೊಲೀಸರು ಹೇಳಿದರು.