<p><strong>ಬೆಂಗಳೂರು</strong>: ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಅಭಿನಂದಿಸಿ ಬಿಎಂಆರ್ಸಿಎಲ್ ಹಾಕಿರುವ ಪೋಸ್ಟ್ಗೆ ಮೆಚ್ಚುಗೆ ವ್ಯಕ್ತವಾಗುವ ಬದಲು ಹತಾಶ ಪ್ರಯಾಣಿಕರಿಂದ ಟೀಕೆಗಳ ಸರಮಾಲೆಯೇ ಬಂದಿದೆ.</p><p>ಪ್ರಯಾಣ ದರ ಏರಿಕೆ, ಹೊಸ ಮಾರ್ಗಗಳ ನಿರ್ಮಾಣದಲ್ಲಿ ವಿಳಂಬ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಮೆಂಟ್ ವಿಭಾಗದಲ್ಲಿ ಪ್ರಸ್ತಾಪಿಸಿರುವ ಪ್ರಯಾಣಿಕರು, ಮೊದಲು ನಿಮ್ಮ ಕೆಲಸದ ಮೇಲೆ ಗಮನಹರಿಸಿ ಎಂದು ಹೇಳಿದ್ದಾರೆ.</p>.<p>ಬುಧವಾರ ಸುನಿತಾ, ಬುಚ್ ಅವರಿಗೆ ಅಭಿನಂದಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಎಂಆರ್ಸಿಎಲ್, ‘ಗಗನಯಾತ್ರಿಗಳಿಗೆ ಭೂಮಿಗೆ ಸ್ವಾಗತ. ನಿಮ್ಮ ಸಾಧನೆ ನಮಗೆ ಹೆಮ್ಮೆ ಪಡುವಂತೆ ಮಾಡಿದೆ’ ಎಂದು ಬರೆದುಕೊಂಡಿತ್ತು.</p><p>ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು, ‘ಮೆಟ್ರೊ ದರ ಯಾವಾಗ ಭೂಮಿಗೆ ಬರುತ್ತದೆ’ ಎಂದು ಕೇಳಿದ್ದಾರೆ.</p>.<p>'ನಿಮ್ಮ ಸಾಧನೆಗಳ ಬಗ್ಗೆ ನಾವು ಹೆಮ್ಮೆ ಪಡಬೇಕೆಂದು ನೀವು ಭಾವಿಸುವುದಿಲ್ಲವೇ?’ ಎಂದು ಮತ್ತೊಬ್ಬ ಬಳಕೆದಾರರು ಪ್ರಶ್ನಿಸಿದ್ದಾರೆ.</p><p>‘ಹಳದಿ ಮತ್ತು ಗುಲಾಬಿ ಮಾರ್ಗದ ಕೆಲಸಗಳು ಹಿಂದೆ ಬಿದ್ದು ಒದ್ದಾಡುತ್ತಿವೆ. ನಿಮ್ಮ ಕೆಲಸ ಮಾಡೋದು ಬಿಟ್ಟು ಇದಕ್ಕೆಲ್ಲ ಸಮಯ ಹಾಳು ಮಾಡಬೇಡಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ಮೊದಲು ನಿಮ್ಮ ಅವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ’ ಎಂದು ನೆಟ್ಟಿಗರು ಹರಿಹಾಯ್ದಿದ್ದಾರೆ.</p><p>ಇತ್ತೀಚೆಗೆ ‘ನಮ್ಮ ಮೆಟ್ರೊ’ ಪ್ರಯಾಣ ದರವನ್ನು ಶೇ 47ರಷ್ಟು ಹೆಚ್ಚಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆ ದರದಲ್ಲಿ ಅಲ್ಪ ಕಡಿಮೆ ಮಾಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಾಹ್ಯಾಕಾಶ ನಿಲ್ದಾಣದಿಂದ ಭೂಮಿಗೆ ಮರಳಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರಿಗೆ ಅಭಿನಂದಿಸಿ ಬಿಎಂಆರ್ಸಿಎಲ್ ಹಾಕಿರುವ ಪೋಸ್ಟ್ಗೆ ಮೆಚ್ಚುಗೆ ವ್ಯಕ್ತವಾಗುವ ಬದಲು ಹತಾಶ ಪ್ರಯಾಣಿಕರಿಂದ ಟೀಕೆಗಳ ಸರಮಾಲೆಯೇ ಬಂದಿದೆ.</p><p>ಪ್ರಯಾಣ ದರ ಏರಿಕೆ, ಹೊಸ ಮಾರ್ಗಗಳ ನಿರ್ಮಾಣದಲ್ಲಿ ವಿಳಂಬ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕಮೆಂಟ್ ವಿಭಾಗದಲ್ಲಿ ಪ್ರಸ್ತಾಪಿಸಿರುವ ಪ್ರಯಾಣಿಕರು, ಮೊದಲು ನಿಮ್ಮ ಕೆಲಸದ ಮೇಲೆ ಗಮನಹರಿಸಿ ಎಂದು ಹೇಳಿದ್ದಾರೆ.</p>.<p>ಬುಧವಾರ ಸುನಿತಾ, ಬುಚ್ ಅವರಿಗೆ ಅಭಿನಂದಿಸಿ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಬಿಎಂಆರ್ಸಿಎಲ್, ‘ಗಗನಯಾತ್ರಿಗಳಿಗೆ ಭೂಮಿಗೆ ಸ್ವಾಗತ. ನಿಮ್ಮ ಸಾಧನೆ ನಮಗೆ ಹೆಮ್ಮೆ ಪಡುವಂತೆ ಮಾಡಿದೆ’ ಎಂದು ಬರೆದುಕೊಂಡಿತ್ತು.</p><p>ಇದಕ್ಕೆ ಪ್ರತಿಕ್ರಿಯಿಸಿರುವ ನೆಟ್ಟಿಗರೊಬ್ಬರು, ‘ಮೆಟ್ರೊ ದರ ಯಾವಾಗ ಭೂಮಿಗೆ ಬರುತ್ತದೆ’ ಎಂದು ಕೇಳಿದ್ದಾರೆ.</p>.<p>'ನಿಮ್ಮ ಸಾಧನೆಗಳ ಬಗ್ಗೆ ನಾವು ಹೆಮ್ಮೆ ಪಡಬೇಕೆಂದು ನೀವು ಭಾವಿಸುವುದಿಲ್ಲವೇ?’ ಎಂದು ಮತ್ತೊಬ್ಬ ಬಳಕೆದಾರರು ಪ್ರಶ್ನಿಸಿದ್ದಾರೆ.</p><p>‘ಹಳದಿ ಮತ್ತು ಗುಲಾಬಿ ಮಾರ್ಗದ ಕೆಲಸಗಳು ಹಿಂದೆ ಬಿದ್ದು ಒದ್ದಾಡುತ್ತಿವೆ. ನಿಮ್ಮ ಕೆಲಸ ಮಾಡೋದು ಬಿಟ್ಟು ಇದಕ್ಕೆಲ್ಲ ಸಮಯ ಹಾಳು ಮಾಡಬೇಡಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಟ್ಯಾಗ್ ಮಾಡಿ ಅಸಮಾಧಾನ ಹೊರ ಹಾಕಿದ್ದಾರೆ.</p>.<p>‘ಮೊದಲು ನಿಮ್ಮ ಅವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ’ ಎಂದು ನೆಟ್ಟಿಗರು ಹರಿಹಾಯ್ದಿದ್ದಾರೆ.</p><p>ಇತ್ತೀಚೆಗೆ ‘ನಮ್ಮ ಮೆಟ್ರೊ’ ಪ್ರಯಾಣ ದರವನ್ನು ಶೇ 47ರಷ್ಟು ಹೆಚ್ಚಿಸಿ ಬಿಎಂಆರ್ಸಿಎಲ್ ಆದೇಶ ಹೊರಡಿಸಿತ್ತು. ಇದರ ವಿರುದ್ಧ ಜನಾಕ್ರೋಶ ವ್ಯಕ್ತವಾದ ಹಿನ್ನೆಲೆ ದರದಲ್ಲಿ ಅಲ್ಪ ಕಡಿಮೆ ಮಾಡಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>