ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಮ್ಮ ಮೆಟ್ರೊ ಸಂಚಾರ ವ್ಯತ್ಯಯ: ಪ್ರಯಾಣಿಕರ ಪರದಾಟ

Last Updated 5 ಡಿಸೆಂಬರ್ 2021, 2:23 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಮೆಟ್ರೊ ರೈಲು ನೇರಳೆ ಮಾರ್ಗದ ಟ್ರಿನಿಟಿ ಮತ್ತು ಹಲಸೂರು ನಿಲ್ದಾಣಗಳ ನಡುವೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದರಿಂದ, ಎಂ.ಜಿ.ರಸ್ತೆಯಿಂದ ಬೈಯ್ಯಪ್ಪನಹಳ್ಳಿ ತನಕ ರೈಲುಗಳ ಸಂಚಾರ ಶನಿವಾರ ಸಂಜೆ 5ರಿಂದ ಸ್ಥಗಿತಗೊಂಡಿತ್ತು. ಇದರಿಂದ ಪ್ರಯಾಣಿಕರು ಸಮಸ್ಯೆ ಎದುರಿಸಿದರು.

ನೇರಳೆ ಮಾರ್ಗದಲ್ಲಿ ಕೆಂಗೇರಿ–ಎಂ.ಜಿ.ರಸ್ತೆ ನಡುವೆ ಮಾತ್ರ ರೈಲುಗಳು ಸಂಚರಿಸಿದವು. ಇದರ ಅರಿವಿಲ್ಲದೆ ಟ್ರಿನಿಟಿ, ಹಲಸೂರು, ಇಂದಿರಾನಗರ, ಸ್ವಾಮಿ ವಿವೇಕಾನಂದ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ರೈಲು ಹತ್ತಲು ಬಂದ ಪ್ರಯಾಣಿಕರು ಗೊಂದಲಕ್ಕೊಳಗಾದರು. ರೈಲು ಸಂಚಾರ ವ್ಯತ್ಯಯವಾದ ಮಾಹಿತಿ ತಿಳಿದು ಬೇರೆ ವಾಹನ ಬಳಸಿದರು.

ಮೆಟ್ರೊ ರೈಲಿನಲ್ಲಿ ಹೊರಟರೆ ನಿಗದಿತ ಸ್ಥಳಕ್ಕೆ ಸಮಯಕ್ಕೆ ಸರಿಯಾಗಿ ತಲುಪಬಹುದು ಎಂದುಕೊಂಡು ನಿಲ್ದಾಣಕ್ಕೆ ಬಂದವರು ತಮ್ಮ ಗುರಿ ತಲುಪಲು ಪರದಾಡಬೇಕಾಯಿತು.

ಭಾನುವಾರ ಬೆಳಿಗ್ಗೆ ವೇಳೆಗೆ ಕಾಮಗಾರಿ ಪೂರ್ಣಗೊಳ್ಳಲಿದ್ದು, 7 ಗಂಟೆ ಬಳಿಕ ಸಂಚಾರ ಸಹಜ ಸ್ಥಿತಿಗೆ ಮರಳಿದೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT