ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಗೇರಿ ಮಾರ್ಗ: 27ಕ್ಕೆ ಪರಿಶೀಲನೆಗೆ ಸಿದ್ಧ

Last Updated 24 ಜೂನ್ 2021, 5:47 IST
ಅಕ್ಷರ ಗಾತ್ರ

ಬೆಂಗಳೂರು: ‘ನಮ್ಮ ಮೆಟ್ರೊ‘ ಎರಡನೇ ಹಂತದಲ್ಲಿ ಮೈಸೂರು ರಸ್ತೆಯ ವಿಸ್ತರಿತ ಮಾರ್ಗದಲ್ಲಿ ಜುಲೈ ಮೊದಲ ವಾರದಿಂದ ಮೆಟ್ರೊ ರೈಲು ಸಂಚಾರ ಆರಂಭವಾಗುವ ಸಾಧ್ಯತೆ ಇದ್ದು, ಮಾರ್ಗವನ್ನು ಇದೇ 27ಕ್ಕೆ ರೈಲ್ವೆ ಸುರಕ್ಷತಾ ಆಯುಕ್ತರು (ಸಿಆರ್‌ಎಸ್‌) ಪರಿಶೀಲನೆ ನಡೆಸಲಿದ್ದಾರೆ.

ಮೈಸೂರು ರಸ್ತೆ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗಿನ 7.53 ಕಿ.ಮೀ. ಉದ್ದದ ಮಾರ್ಗದಲ್ಲಿ ಈಗಾಗಲೇ ಭೌತಿಕ ಕಾಮಗಾರಿ ಪೂರ್ಣಗೊಂಡಿದೆ. ಸಿಗ್ನಲಿಂಗ್, ದೂರಸಂವಹನ ಸಂಬಂಧಿತ ವ್ಯವಸ್ಥೆ ಅಳವಡಿಕೆಯೂ ಬಹುತೇಕ ಪೂರ್ಣಗೊಂಡಿದೆ.

‘ಸಿಆರ್‌ಎಸ್‌ಗೆ ಕಾಮಗಾರಿ ಪ್ರಗತಿಯ ಕುರಿತ ಎಲ್ಲ ದಾಖಲೆಗಳನ್ನು ಸಲ್ಲಿಸಲಾಗಿದೆ. ಕೆಲವು ಅಂಶಗಳ ಬಗ್ಗೆ ಸಿಆರ್‌ಎಸ್‌ ಸ್ಪಷನೆ ಕೇಳಿದೆ. ಅದಕ್ಕೆ ನಾವು ಪ್ರತಿಕ್ರಿಯೆ ನೀಡಬೇಕು. ಪ್ರತಿಕ್ರಿಯೆ ನೀಡಿದ ಕೆಲವೇ ದಿನಗಳಲ್ಲಿ ಸಿಆರ್‌ಎಸ್‌ ಪರಿಶೀಲನೆಯ ದಿನಾಂಕವನ್ನು ತಿಳಿಸಲಿದೆ’ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ಅಧಿಕಾರಿಯೊಬ್ಬರು ತಿಳಿಸಿದರು.

‘ಇಡೀ ಮಾರ್ಗ ಪರಿಶೀಲನೆಗೆ ಸಿದ್ಧವಾಗಿದೆ. ಉಳಿದ ಸಣ್ಣ–ಪುಟ್ಟ ಕೆಲಸಗಳನ್ನು ಯಾವುದೇ ಕ್ಷಣದಲ್ಲಿ ಬಗೆಹರಿಸಬಹುದಾಗಿದೆ. ಪರಿಶೀಲನೆ ಸಂದರ್ಭದಲ್ಲಿ ಯಾವುದಾದರೂ ಸಲಹೆ ನೀಡಿದರೆ, ಪ್ರಶ್ನೆ ಕೇಳಿದರೆ ಪರಿಹರಿಸಲು ಅಥವಾ ಸಲಹೆ ಪರಿಗಣಿಸುವ ಕೆಲಸ ನಿಗಮ ಮಾಡಲಿದೆ. ಜುಲೈನಲ್ಲಿ ಹಸಿರು ನಿಶಾನೆ ದೊರೆಯುವ ಸಾಧ್ಯತೆ ಇದೆ’ ಎಂದು ಅವರು ಹೇಳಿದರು.

ಈ ಮಾರ್ಗವು ಸಾರ್ವಜನಿಕ ಸೇವೆಗೆ ಮುಕ್ತವಾದರೆ ನಿತ್ಯ 75 ಸಾವಿರ ಜನ ಪ್ರಯಾಣಿಸುವ ಸಾಧ್ಯತೆ ಇದೆ. ಈ ವಿಸ್ತರಿತ ಮಾರ್ಗದಲ್ಲಿ ನಾಯಂಡಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್‌ ನಿಲ್ದಾಣ ಹಾಗೂ ಕೆಂಗೇರಿ ಮೆಟ್ರೊ ನಿಲ್ದಾಣ ಬರಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT