ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಕ್ಕಾಗಿ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಎನ್ಸಿಸಿ ಕಂಪನಿಯ ನಿರ್ದೇಶಕ ಚೈತನ್ಯ, ವಿಶೇಷ ಯೋಜನಾ ವ್ಯವಸ್ಥಾಪಕ ಮಾಥೈ, ಯೋಜನಾ ನಿರ್ದೇಶಕ ವಿಕಾಸ್ ಸಿಂಗ್, ಬಿಎಂಆರ್ಸಿಎಲ್ನ ಉಪ ಮುಖ್ಯ ಎಂಜಿನಿಯರ್ ವೆಂಕಟೇಶ ಶೆಟ್ಟಿ, ಕಾರ್ಯನಿರ್ವಾಹಕ ಎಂಜಿನಿಯರ್ ಮಹೇಶ್ ಬೆಂಡೆಕರಿ ಹಾಗೂ ಎಂಜಿನಿಯರ್ ಜಾಫರ್ ಸಾದಿಕ್ ವಿಚಾರಣೆಗೆ ಹಾಜರಾದರು. ತನಿಖಾಧಿಕಾರಿಗಳು ಸಿದ್ಧಪಡಿಸಿದ್ದ ಪ್ರಶ್ನೆಗಳಿಗೆ ಉತ್ತರಿಸಿ ಹೇಳಿಕೆ ನೀಡಿದರು.