<p><strong>ಬೆಂಗಳೂರು</strong>: ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ. ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರೈಲು ಸಂಚಾರದಲ್ಲಿ ವ್ಯತ್ಯಯ ಆಗಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.</p>.<p><a href="https://www.prajavani.net/district/bengaluru-city/bengaluru-encroachment-and-cm-basavaraj-bommai-said-home-demolish-not-only-solution-972184.html" itemprop="url">ಮನೆ ನೆಲಸಮವೇ ಪರಿಹಾರವಲ್ಲ: ಸಿ.ಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಮೈಸೂರು ರಸ್ತೆ ಮತ್ತು ಕೆಂಗೇರಿ ನಡುವಿನ ಮೆಟ್ರೊ ರೈಲು ಮಾರ್ಗದಲ್ಲಿ(ನೇರಳೆ ಮಾರ್ಗ) ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.</p>.<p>ಒಂದೇ ಟ್ರ್ಯಾಕ್ ನಲ್ಲಿ 25ರಿಂದ 30 ನಿಮಿಷಕ್ಕೊಂದು ರೈಲು ಸಂಚರಿಸುತ್ತಿವೆ. ತಾಂತ್ರಿಕ ದೋಷ ಸರಿಪಡಿಸಲು ನಿರ್ವಹಣಾ ತಂಡ ಪರಿಶೀಲನೆ ನಡೆಸುತ್ತಿದೆ. ಶೀಘ್ರದಲ್ಲೇ ಸಮಸ್ಯೆ ಸರಿಯಾಗಲಿದ್ದು, ರೈಲುಗಳ ಸಂಚಾರ ಸಹಜವಾಗಲಿದೆ ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ರೈಲು ಸಂಚಾರದಲ್ಲಿ ವ್ಯತ್ಯಯ ಆಗಿರುವುದರಿಂದ ಮೈಸೂರು ರಸ್ತೆಯಿಂದ ಕೆಂಗೇರಿ ತನಕದ ನಿಲ್ದಾಣಗಳಲ್ಲಿ ಪ್ರಯಾಣಿಕರು ರೈಲಿಗಾಗಿ ಕಾಯುತ್ತಿದ್ದಾರೆ. ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ತೆರಳಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.</p>.<p><a href="https://www.prajavani.net/district/bengaluru-city/bengaluru-encroachment-and-cm-basavaraj-bommai-said-home-demolish-not-only-solution-972184.html" itemprop="url">ಮನೆ ನೆಲಸಮವೇ ಪರಿಹಾರವಲ್ಲ: ಸಿ.ಎಂ ಬೊಮ್ಮಾಯಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>