ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಟ್ರೊ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ಯುವಕರ ಬಂಧನ

Last Updated 4 ಡಿಸೆಂಬರ್ 2019, 19:50 IST
ಅಕ್ಷರ ಗಾತ್ರ

ಬೆಂಗಳೂರು: ಎಂ.ಜಿ.ರಸ್ತೆಯ ಮೆಟ್ರೊ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭದ್ರತಾ ಸಿಬ್ಬಂದಿ ನಿತೇಶ್‌ಕುಮಾರ್ ಎಂಬುವರ ಮೇಲೆ ಹಲ್ಲೆ ನಡೆಸಿದ ಇಬ್ಬರು ಯುವಕರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪ್ರಭಾಕರ್ ಮತ್ತು ಜಾನ್ ಬಂಧಿತರು. ಇದೇ 1ರಂದು ಮಧ್ಯಾಹ್ನ ನಡೆದಿರುವ ಘಟನೆ ಸಂಬಂಧ ಭದ್ರತಾ ಮೇಲ್ವಿಚಾರಕ ಎಸ್‌.ಪೇರುಮಾಳ್ ಅವರು ದೂರು ನೀಡಿದ್ದರು. ಹಲ್ಲೆನಡೆಸಿದ್ದ ಪ್ರಭಾಕರ್ ಹಾಗೂ ಜಾನ್ ತಲೆ ಮರೆಸಿಕೊಂಡಿದ್ದರು.

ಎಂ.ಜಿ.ರಸ್ತೆಯ ಮೆಟ್ರೊ ನಿಲ್ದಾಣಕ್ಕೆ ಹೊಂದಿಕೊಂಡಿರುವ ಬುಲೆವಾರ್ಡ್‌ನಲ್ಲಿ ನಿತೇಶ್‌ಕುಮಾರ್ ಅವರು ಗಸ್ತು ತಿರುಗುತ್ತಿದ್ದರು. ನಿರ್ಬಂಧಿತ ಜಾಗದಲ್ಲಿ ನಿಂತಿದ್ದ ಆರೋಪಿಗಳನ್ನು ನೋಡಿ ಸ್ಥಳದಿಂದ ಹೊರಟು ಹೋಗುವಂತೆ ಹೇಳಿದ್ದರು. ಅಷ್ಟಕ್ಕೆ ಸಿಟ್ಟಾದ ಆರೋಪಿಗಳು ನಿತೇಶ್‌ಕುಮಾರ್ ಜೊತೆ ಜಗಳ ತೆಗೆದಿದ್ದರು.

ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಆರೋಪಿಗಳು ಕೈಯಲ್ಲಿದ್ದ ಉಂಗುರದಿಂದ ನಿತೇಶ್‌ಕುಮಾರ್ ಅವರ ಮುಖಕ್ಕೆ ಹೊಡೆದಿದ್ದರು. ರಕ್ತ ಸೋರಲಾರಂಭಿಸಿತ್ತು. ರಕ್ಷಣೆಗೆ ಬಂದ ಸಹೋದ್ಯೋಗಿಗಳೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT