ಮೊದಲೇ ಮಾಹಿತಿ ನೀಡಿ: ‘ನಮ್ಮ ಮೆಟ್ರೊ’ದ ಎರಡನೇ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸುವ ಉದ್ದೇಶ ಹೊಂದಿದಂತಿರುವ ಕೇಂದ್ರ ಸರ್ಕಾರ, ಇನ್ನು ಮುಂದೆ, ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರನ್ನು ವರ್ಗಾವಣೆ ಮಾಡುವ ಮುನ್ನ, ತನ್ನ ಗಮನಕ್ಕೆ ತರಲೇಬೇಕು ಎಂದು ರಾಜ್ಯಸರ್ಕಾರಕ್ಕೆ ಸೂಚನೆ ನೀಡಿದೆ. ಅವರಿಗೆ ಯಾವುದೇ ಇತರೆ ಅಥವಾ ಹೆಚ್ಚುವರಿ ಹೊಣೆ ನೀಡಬಾರದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಸೂಚನೆ ನೀಡಿದೆ.