<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ದ ಆರ್.ವಿ. ರಸ್ತೆ ನಿಲ್ದಾಣದಲ್ಲಿ ಸದ್ಯದಲ್ಲಿಯೇ ಪಾದಚಾರಿ ಮೇಲ್ಸೇತುವೆ (ಎಫ್ಒಬಿ) ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ. ಇದಕ್ಕಾಗಿ ನಿಲ್ದಾಣದ ಒಂದು ಭಾಗವನ್ನು ಕೆಡವಲಾಗುತ್ತದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಅಧಿಕಾರಿ ತಿಳಿಸಿದರು.</p>.<p>ನಿಲ್ದಾಣದ ದಕ್ಷಿಣ ಭಾಗದಿಂದ ಪ್ಲಾಟ್ಫಾರಂಗೆ ತೆರಳಲು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶ<br />ದಿಂದ ಈ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.</p>.<p>‘ನಮ್ಮ ಮೆಟ್ರೊ’ದ ಎರಡನೇ ಹಂತದಲ್ಲಿ, ಆರ್.ವಿ. ರಸ್ತೆ – ಬೊಮ್ಮಸಂದ್ರ (ರೀಚ್ 5) ಮಾರ್ಗ ವಿಸ್ತರಣೆ ಮಾಡುತ್ತಿರುವುದರಿಂದಲೂ ಇಲ್ಲಿ ಅಂತರ್ನಿಲ್ದಾಣ ನಿರ್ಮಿಸಲಾಗುತ್ತಿದೆ. ಈ ಮಾರ್ಗದ ಪ್ರಯಾಣಿಕರು ಈ ಮೇಲ್ಸೇತುವೆಯ ಮೂಲಕ ಪ್ಲಾಟ್ಫಾರಂ ತಲುಪಬಹುದಾಗಿದೆ.</p>.<p>‘ನಿಲ್ದಾಣದ ಒಂದು ಭಾಗವನ್ನು ನೆಲಸಮಗೊಳಿಸುವ ಕಾರ್ಯವನ್ನು ಮೂರು ಹಂತಗಳಲ್ಲಿ ಕೈಗೊಳ್ಳಲಾಗುತ್ತದೆ. ಅಂದರೆ, ರೈಲು ಸಂಚಾರ ಕಾರ್ಯಾಚರಣೆಗೆ ಹೆಚ್ಚು ತೊಂದರೆಯಾಗದ ರೀತಿಯಲ್ಲಿ ಈ ಕಾಮಗಾರಿ ನಡೆಸಲಾಗುವುದು. ಅಂತಿಮ ಹಂತದಲ್ಲಿ, ಪ್ರಯಾಣಿಕರಿಗೆ ತೊಂದರೆಯಾಗಬಹುದು’ ಎಂದು ನಿಗಮದ ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ನಮ್ಮ ಮೆಟ್ರೊ’ದ ಆರ್.ವಿ. ರಸ್ತೆ ನಿಲ್ದಾಣದಲ್ಲಿ ಸದ್ಯದಲ್ಲಿಯೇ ಪಾದಚಾರಿ ಮೇಲ್ಸೇತುವೆ (ಎಫ್ಒಬಿ) ನಿರ್ಮಾಣ ಕಾಮಗಾರಿ ಪ್ರಾರಂಭವಾಗಲಿದೆ. ಇದಕ್ಕಾಗಿ ನಿಲ್ದಾಣದ ಒಂದು ಭಾಗವನ್ನು ಕೆಡವಲಾಗುತ್ತದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಅಧಿಕಾರಿ ತಿಳಿಸಿದರು.</p>.<p>ನಿಲ್ದಾಣದ ದಕ್ಷಿಣ ಭಾಗದಿಂದ ಪ್ಲಾಟ್ಫಾರಂಗೆ ತೆರಳಲು ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡುವ ಉದ್ದೇಶ<br />ದಿಂದ ಈ ಮೇಲ್ಸೇತುವೆ ನಿರ್ಮಾಣ ಮಾಡಲಾಗುತ್ತಿದೆ.</p>.<p>‘ನಮ್ಮ ಮೆಟ್ರೊ’ದ ಎರಡನೇ ಹಂತದಲ್ಲಿ, ಆರ್.ವಿ. ರಸ್ತೆ – ಬೊಮ್ಮಸಂದ್ರ (ರೀಚ್ 5) ಮಾರ್ಗ ವಿಸ್ತರಣೆ ಮಾಡುತ್ತಿರುವುದರಿಂದಲೂ ಇಲ್ಲಿ ಅಂತರ್ನಿಲ್ದಾಣ ನಿರ್ಮಿಸಲಾಗುತ್ತಿದೆ. ಈ ಮಾರ್ಗದ ಪ್ರಯಾಣಿಕರು ಈ ಮೇಲ್ಸೇತುವೆಯ ಮೂಲಕ ಪ್ಲಾಟ್ಫಾರಂ ತಲುಪಬಹುದಾಗಿದೆ.</p>.<p>‘ನಿಲ್ದಾಣದ ಒಂದು ಭಾಗವನ್ನು ನೆಲಸಮಗೊಳಿಸುವ ಕಾರ್ಯವನ್ನು ಮೂರು ಹಂತಗಳಲ್ಲಿ ಕೈಗೊಳ್ಳಲಾಗುತ್ತದೆ. ಅಂದರೆ, ರೈಲು ಸಂಚಾರ ಕಾರ್ಯಾಚರಣೆಗೆ ಹೆಚ್ಚು ತೊಂದರೆಯಾಗದ ರೀತಿಯಲ್ಲಿ ಈ ಕಾಮಗಾರಿ ನಡೆಸಲಾಗುವುದು. ಅಂತಿಮ ಹಂತದಲ್ಲಿ, ಪ್ರಯಾಣಿಕರಿಗೆ ತೊಂದರೆಯಾಗಬಹುದು’ ಎಂದು ನಿಗಮದ ಅಧಿಕಾರಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>