ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರೈಲ್ವೆ ಕೆಳ ಸೇತುವೆಗಳ ನಿರ್ಮಾಣಕ್ಕೆ ನೈರುತ್ಯ ರೈಲ್ವೆ ಈಗಾಗಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುತ್ತಿದ್ದು, ಇದಕ್ಕೆ ಬಿಎಂಆರ್ಸಿಎಲ್ ಹಣ ಒದಗಿಸಲಿದೆ. ಫ್ರೇಜರ್ ಟೌನ್ ಬಳಿ (ಪಾಟರಿ ರಸ್ತೆಯಿಂದ ನೇತಾಜಿ ರಸ್ತೆಗೆ ಸಂಪರ್ಕಿಸುವ ರಸ್ತೆ) ಒಂದು ಸೇತುವೆ, ಪಾಟರಿ ಟೌನ್ ಮೆಟ್ರೋ ನಿಲ್ದಾಣದ ಬಳಿ (ನೇತಾಜಿ ರಸ್ತೆಯಿಂದ ಬೋರ್ ಬ್ಯಾಂಕ್ ರಸ್ತೆಗೆ ಸಂಪರ್ಕಿಸುವ ರಸ್ತೆ) ಇನ್ನೊಂದು ಕೆಳ ಸೇತುವೆ ನಿರ್ಮಿಸಲು ಯೋಜಿಸಲಾಗಿದೆ.