‘ನಾಗಸಂದ್ರದಲ್ಲಿ ನಿರ್ಮಾಣವಾಗುತ್ತಿರುವ ಪಾದಚಾರಿ ಮೇಲ್ಸೇತುವೆಯನ್ನು ಹಾಗೂ ಮೆಟ್ರೊ ನಿಲ್ದಾಣದ ಕಾನ್ಕೋರ್ಸ್ ಹಂತವನ್ನು ಜೋಡಿಸಲು ಹೊಸ ಸೇತುವೆ ನಿರ್ಮಾಣವಾಗಲಿದೆ. ದಾಸರಹಳ್ಳಿಯಲ್ಲಿ ರಸ್ತೆ ದಾಟಲು ಸೇತುವೆ ನಿರ್ಮಾಣವಾಗಲಿದೆ. ಉಳಿದ ನಾಲ್ಕು ಸೇತುವೆಗಳು ನಮ್ಮ ಮೆಟ್ರೊ ಎರಡನೇ ಹಂತದಲ್ಲಿ ನಿರ್ಮಾಣವಾಗುವ ಮೆಟ್ರೊ ನಿಲ್ದಾಣಗಳಿಗೆ ಸಂಪರ್ಕ ಕಲ್ಪಿಸಲಿವೆ. ಕೆಂಗೇರಿ ಬಸ್ನಿಲ್ದಾಣದ ಪಕ್ಕದ ಮೈಲಸಂದ್ರ ಮೆಟ್ರೊ ನಿಲ್ದಾಣದಲ್ಲಿ ಹಾಗೂ ಪಾದಚಾರಿ ಮೇಲ್ಸೇತುವೆ ನಿರ್ಮಾಣವಾಗಲಿದೆ. ಜ್ಞಾನಭಾರತಿಯಲ್ಲೂ ಮೆಟ್ರೊ ನಿಲ್ದಾಣ ಮತ್ತು ರೈಲು ನಿಲ್ದಾಣ ಸಂಪರ್ಕಿಸುವ ಸೇತುವೆ ನಿರ್ಮಾಣವೂ ಈ ಕಾಮಗಾರಿಗಳಲ್ಲಿ ಸೇರಿದೆ’ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಬಿ.ಎಲ್.ಯಶವಂತ ಚೌಹಾಣ್ ಮಾಹಿತಿ ನೀಡಿದರು.