ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಧಾಮೂರ್ತಿ ಭಾಷಣ ನಾಳೆ

Last Updated 10 ಫೆಬ್ರುವರಿ 2021, 18:48 IST
ಅಕ್ಷರ ಗಾತ್ರ

ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್‌ ಮುಖ್ಯಸ್ಥೆ, ಲೇಖಕಿ ಡಾ. ಸುಧಾಮೂರ್ತಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶುಕ್ರವಾರ ಮಾತನಾಡಲಿದ್ದಾರೆ.

ನಗರದ ಬಿಎಂಎಸ್‌ ಎಂಜಿನಿಯರಿಂಗ್‌ ಕಾಲೇಜಿನ 75ನೇ ಬ್ಯಾಚ್‌ನ ವಿದ್ಯಾರ್ಥಿಗಳನ್ನು ಕುರಿತು ಫೆ.12ರಂದು ಬೆಳಿಗ್ಗೆ 11ಕ್ಕೆ ಆನ್‌ಲೈನ್‌ ಮೂಲಕ ಅವರು ಮಾತನಾಡಲಿದ್ದಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.

ಎಂಜಿನಿಯರಿಂಗ್ ವಿಷಯದ ಶಿಕ್ಷಕಿಯಾಗಿ, ಕನ್ನಡ, ಇಂಗ್ಲಿಷ್ ಹಾಗೂ ಮರಾಠಿ ಕೃತಿಗಳ ಲೇಖಕರಾಗಿಯೂ ಗುರುತಿಸಿಕೊಂಡಿರುವ ಸುಧಾಮೂರ್ತಿಯವರ ಕೃತಿಗಳು ದೇಶದ ಎಲ್ಲ ಪ್ರಮುಖ ಭಾಷೆಗಳಿಗೆ ಭಾಷಾಂತರಗೊಂಡಿವೆ. 30 ಲಕ್ಷಕ್ಕೂ ಹೆಚ್ಚು ಪ್ರತಿಗಳು ಮಾರಾಟವಾಗಿರುವುದು ಅವರ ಜನಪ್ರಿಯತೆಗೆ ಸಾಕ್ಷಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT