ಪತ್ರಿಕಾರಂಗ ಹಾಗೂ ಮಾಧ್ಯಮ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಎಚ್.ಎನ್. ಆನಂದ್ ಅವರು ‘ಪ್ರಜಾವಾಣಿ’ಯಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದಾರೆ. 1970-80ರ ದಶಕದಲ್ಲಿ ‘ಸುಧಾ’ ವಾರಪತ್ರಿಕೆಯಲ್ಲಿ ಕಾರ್ಯನಿರ್ವಹಿಸಿದ್ದ ಅವರು, ಕನ್ನಡ ನಿಯತಕಾಲಿಕೆಯಲ್ಲಿ ‘ಕವರ್ ಸ್ಟೋರಿ’ ಪರಿಕಲ್ಪನೆಯನ್ನು ಪರಿಚಯಿಸಿದ್ದರು. ಅಲ್ಲಿ ಅವರು ಬರೆಯುತ್ತಿದ್ದ ‘ವಾರೆನೋಟ’ ಅಂಕಣ ಮೊನಚಾದ ಹಾಸ್ಯ ಮತ್ತು ವಿಡಂಬನೆಯಿಂದ ಪ್ರಸಿದ್ಧವಾಗಿತ್ತು.ಅದಕ್ಕೂ ಮೊದಲು ವಿವಿಧ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ