ಗೈರು ಹಾಜರಿ: ಶಿಸ್ತು ಕ್ರಮ ಜರುಗಿಸದಂತೆ ಸೂಚನೆ
ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಗೈರು ಹಾಜರಿಯಾಗಿರುವ ಪ್ರಕರಣಗಳನ್ನು ವಿಶೇಷ ಎಂದು ಪರಿಗಣಿಸಿ ಶಿಸ್ತು ಕ್ರಮ ಇಲ್ಲದೆ ಇತ್ಯರ್ಥಪಡಿಸಲು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ.ಶಿಖಾ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
‘ಮಾ.23ರಿಂದ 90 ದಿನ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಯ ಗೈರು ಹಾಜರಿ ಪ್ರಕರಣಗಳನ್ನು ಲಘುವಾಗಿ ಪರಿಗಣಿಸಬೇಕು. ಈಗಾಗಲೇ ವಿಚಾರಣೆ ಆರಂಭಿಸಿದ್ದರೆ ಶಿಸ್ತು ಕ್ರಮ ಹಿಂಪಡೆಯಬೇಕು. ಈ ನಿರ್ದೇಶನಗಳು ಅ.1ರೊಳಗೆ ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರಿಗೆ ಮಾತ್ರ ಅನ್ವಯವಾಗುತ್ತದೆ’ ಎಂದು ತಿಳಿಸಿದ್ದಾರೆ.
ಲಾಕ್ಡೌನ್ ಸಡಿಲದ ಬಳಿಕವೂ ಅಕ್ಟೋಬರ್ನಿಂದ ಈವರೆಗೆ ರಜೆ ಪಡೆಯದೆ 809 ನೌಕರರು ಕರ್ತವ್ಯಕ್ಕೆ ದೀರ್ಘ ಕಾಲದ ಗೈರು ಹಾಜರಾಗಿದ್ದಾರೆ. ನಿಯಮಾನುಸಾರ ಈ ನೌಕರರಿಗೆ ಕರೆಯೋಲೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೂ ಪ್ರತಿಕ್ರಿಯೆ ಬಾರದಿದ್ದರೆ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.